ನಮ್ಮ ಮೈಸೂರ ದಸರಾ 2025

Mysuru dasara | ಅರಮನೆಯಲ್ಲಿ ಥೈಕ್ಕುಡಂ ಬ್ರಿಡ್ಜ್‌ ಸಂಗೀತದ ಹೊಳೆ

ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆ, ರಂಜಿಸಿದ ಮಲೆಯಾಳಂ ಗೀತೆ ಹಾಗೂ ಯುವ ಮನಸ್ಸುಗಳ ಕುಣಿತಗಳ ನಡುವೆ ಕೇರಳದ ‘ಥೈಕ್ಕುಡಂ ಬ್ರಿಡ್ಜ್’ ಬ್ಯಾಂಡ್ ಅಂಬಾವಿಲಾಸ ಅರಮನೆ ಮುಂಭಾಗದ ವೇದಿಕೆಯಲ್ಲಿ ಸಂಗೀತದ ಹೊಳೆಯನ್ನೇ ಹರಿಸಿತು.

೩೦ಕ್ಕೂ ಹೆಚ್ಚು ದೇಶಗಳಲ್ಲಿ ೮೦೦ಕ್ಕೂ ಹೆಚ್ಚು ಸಂಗೀತ ಪ್ರರ್ದಶಿಸಿ ಅಪಾರ ಅಭಿಮಾನಿಗಳನ್ನಿ ಪ್ರಂಪಚದ್ಯಾಂತ ಗಳಿಸಿರುವ ಥೈಕ್ಕುಡಂ ಬ್ರಿಡ್ಜ್ ಇದೇ ಮೊದಲ ಬಾರಿಗೆ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರದರ್ಶನ ನೀಡಿತು.

ಕೇರಳದ ವಿದ್ಯಾರ್ಥಿಗಳು ಬ್ಯಾಂಡ್ ವೀಕ್ಷಣೆಗೆ ಅರಮನೆ ತುಂಬಿದ್ದರು. ಎಲ್ಲರಿಗೂ ನಮಸ್ಕಾರ ದಸರಾ ಹಬ್ಬದ ಶುಭಾಶಯಗಳು ಆರ್ಥಿಕ ಶುಭಾಶಯಗಳು ಎಂದು ಕನ್ನಡದಲ್ಲೇ ಹೇಳಿ ನವರಸಂ ಗೀತೆಯನ್ನು ಬ್ಯಾಂಡ್‌ನ ಸದಸ್ಯರು ಪ್ರಸ್ತುತಪಡಿಸಿದರು.

ಇದನ್ನು ಓದಿ : ಮೈಸೂರಿನಲ್ಲಿ ವಿಂಟೇಜ್ ಕಾರುಗಳ ಹವಾ

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಸಂಯೋಜನೆಯ ‘ರೆಟ್ಟ್ತ್ಯೈ ವಾಲ್ ಕುರುವಿ’ ಸಿನಿಮಾದ ‘ರಾಜರಾಜ ಸೋ ಳನ್ನ….’ ಎಂಬ ಗೀತೆಯನ್ನು ಹಾಡುತ್ತಿದ್ದಂತೆ ಯುವ ಸಮೂಹ ಹುಚ್ಚೆದ್ದು ಕುಣಿದು ಕುಪ್ಪಳಿಸಿತು.

ತೇರಿ ದಿವಾನಿ ದಿವಾನಿ… ಗೀತೆಯನ್ನು ಭಾವನಾತ್ಮಕವಾಗಿ ಹಾಡಿ ಪ್ರೇಕ್ಷಕರ ಮನಮುಟ್ಟಿದರು. ಬಳಿಕ ಶಾಸ್ತ್ರೀಯ ಆಲಾಪದೊಂದಿಗೆ ‘ಓಂಶಿವೋಂ ರುದ್ರನಾಮ….’ ಎಂಬ ಗೀತೆ ಹಾಡಿ ಭಕ್ತಿ ಸಂಚಲನ ಮೂಡಿಸಿದರು. ನಂತರ ತಮಿಳಿನ ೯೬ ಸಿನಿಮಾದ ‘ಕಾತಲೆ ಕಾತಲೆ’ ಹಾಡಡು ಯುವಸಮೂಹವನ್ನು ಬೇರೊಂದು ಲೋಕಕ್ಕೆ ಕೊಂಡ್ಯೊಯಿತು. ಕನ್ನಡ, ಮಲಯಾಳಂ ಹಾಗೂ ಹಿಂದಿ ಭಾಷೆಯ ಹಲವಾರು ಆಲ್ಬಂ ಹಾಡುಗಳನ್ನು ಹಾಡುಗಳನ್ನು ತಮ್ಮ ವಿಶಿಷ್ಟ ರಾಕ್ ಬ್ಯಾಂಡ್ ಮ್ಯೂಸಿಕ್ ಮೂಲಕ ಹಾಡಿ ನೋಡುಗರನ್ನು ರಂಜಿಸಿದರು.

ಇದಕ್ಕೂ ಮುನ್ನ ರಘುರಾಮ್ ಮತ್ತು ತಂಡ ಕರ್ನಾಟಕ ಶಾಸ್ತ್ರಿಯ ಸಂಗೀತದ ಮೂಲಕ ಶಾಸ್ತ್ರಿಯ ಸಂಗೀತ ರಸಿಕರಿಗೆ ಸಂಗೀತ ರಸದೌತಣ ನೀಡಿದರು ಹಾಗೂ ಡಾ. ಶ್ವೇತಾ ಮಡಪ್ಪಾಡಿ ಅವರು ಜನಪದ ಶೈಲಿಯಲ್ಲಿ ಮಾದಪ್ಪನ ಜನಪದ ಗೀತೆ ಹಾಗೂ ಹಲವು ದೇವರ ಗೀತೆಗಳನ್ನು ತಮ್ಮದೇ ವಿಶಿಷ್ಟ ಶೈಲಿ ಗಾಯನದಿಂದ ಮೋಡಿ ಮಾಡಿದರು.

ಎರಡನೇ ದಿನ ಅರಮನೆ ಆವರಣದಲ್ಲಿ ಪ್ರೇಕ್ಷಕರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು. ಆಸನಗಳೆಲ್ಲ ಭರ್ತಿ ಆಗಿದ್ದು, ಸಾವಿರಾರು ಮಂದಿ ನಿಂತುಕೊಂಡೇ ಕಾರ್ಯಕ್ರಮ ವೀಕ್ಷಣೆ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಶಿವಕುಮಾರ್, ಜಿಲ್ಲಾಕಾರಿ ಲಕ್ಷ್ಮಿಕಾಂತ್ ರೆಡ್ಡಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

7 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

7 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

8 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

10 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

11 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

13 hours ago