ನಮ್ಮ ಮೈಸೂರ ದಸರಾ 2025

Mysuru Dasara | ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಅರಮನೆ ನಗರಿ

ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಅರಮನೆ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಝಗಮಗಿಸುವ ಮೂಲಕ ದೇಶ-ವಿದೇಶದ ಲಕ್ಷಾಂತರ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಪ್ರಮುಖ ವೃತ್ತ, ರಸ್ತೆಗಳಲ್ಲಿ ವಿಶಿಷ್ಠವಾಗಿ ಅಲಂಕಾರ ಮಾಡಿರುವುದರ ಜತೆಗೆ ಇಡೀ ಮೈಸೂರು ಸುತ್ತುವರಿದಂತೆ ದೀಪಾಲಂಕಾರ ಮಾಡಿರುವ ಹಿನ್ನೆಲೆಯಲ್ಲಿ ನೋಡುಗರನ್ನು ಮತ್ತೆ ಮತ್ತೆ ಕಣ್ಮನ ಸೆಳೆಯುತ್ತಿದೆ. ನಾಲ್ಕು ಭಾಗಗಳಿಂದ ನಗರಕ್ಕೆ ಹಾದು ಬರುವ ನಾಲ್ಕು ಮಾರ್ಗದ ರಸ್ತೆಯ ೧೪೬ ಕಿ.ಮೀ ರಸ್ತೆ ಅಲ್ಲದೆ ನಗರದ ೧೧೧೩ ವೃತ್ತವನ್ನುಬೆಳಕಿನ ಮಯ ಮಾಡಿರುವುದರಿಂದ ಸಂಜೆ ವೇಳೆ ನೋಡುವುದೇ ಒಂದು ಚೆಂದವಾಗಿದೆ. ಈ ಬಾರಿಯೂ ವಿಶೇಷವಾಗಿಹಲವು ಮಾದರಿಗಳನ್ನು ರೂಪಿಸಿ ದೀಪಾಲಂಕಾರದ ಸೊಬಗನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ;ಮೈಸೂರು ದಸರಾಗೆ ಆಗಮಿಸುವ ನಾಡ ಜನತೆಗೆ ರೈಲ್ವೆ ಇಲಾಖೆಯಿಂದ ಬಿಗ್ ಗಿಫ್ಟ್

ದೇಶ ಮತ್ತು ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವ ದಸರಾ ಅಂಬಾರಿ, ಕೆಆರ್‌ಎಸ್ ಅಣೆಕಟ್ಟು, ಅಶೋಕ ಸ್ಥಂಭ, ನಡೆದಾಡುವ ದೇವರೆಂದೆ ಕರೆಸಿಕೊಂಡಿದ್ದ ಸಿದ್ಧಗಂಗಾಶ್ರೀ,ಬಸವಣ್ಣ, ಕನಕದಾಸ,ಅಂಬೇಡ್ಕರ್ ಮಾದರಿಗಳನ್ನು ಮಾಡಲಾಗಿದೆ.

ಪ್ರತಿಕೃತಿಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಿ ನಗರದ ನಾನಾ ಕಡೆ ನಿರ್ಮಿಸಿದೆ. ಇದಲ್ಲದೇ ಎಂದಿನಂತೆ ಈ ಬಾರಿಯೂ ಚಾಮುಂಡೇಶ್ವರಿ ದೇವಿ, ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್, ಸಂಸತ್ ಭವನ, ವಿಧಾನಸೌಧ ಪ್ರತಿಕೃತಿಗಳನ್ನು ನಿರ್ಮಿಸಿರುವುದು ಗಮನ ಸೆಳೆದಿದೆ. ಈ ಮಾರ್ಗದಲ್ಲಿ ಸಂಜೆಯಾದ ಬಳಿಕ ಓಡಾಡುವ ಪ್ರವಾಸಿಗರು, ಸ್ಥಳೀಯರು, ಯುವಕ-ಯುವತಿಯರು ಕೆಲಹೊತ್ತು ನಿಂತು ವೀಕ್ಷಿಸುವ ಜತೆಗೆ,ಅದರ ಮುಂದೆ ಸೆಲ್ಛಿ ಕ್ಲಿಕ್ಕಿಸಿಕೊಳ್ಳುತ್ತಿರುವುದು ಕಾಣಬಹುದು. ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ,ಡಿಸಿಎಂ,ಇಂಧನ ಸಚಿವರು,ಉಸ್ತುವಾರಿ ಸಚಿವರ ಭಾವಚಿತ್ರವನ್ನು ವಿದ್ಯುತ್‌ನಿಂದ ಕಂಗೊಳಿಸುವಂತೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

52 mins ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

2 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

2 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

2 hours ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

2 hours ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

2 hours ago