ನಮ್ಮ ಮೈಸೂರ ದಸರಾ 2025

Mysuru Dasara | ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಅರಮನೆ ನಗರಿ

ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಅರಮನೆ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಝಗಮಗಿಸುವ ಮೂಲಕ ದೇಶ-ವಿದೇಶದ ಲಕ್ಷಾಂತರ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಪ್ರಮುಖ ವೃತ್ತ, ರಸ್ತೆಗಳಲ್ಲಿ ವಿಶಿಷ್ಠವಾಗಿ ಅಲಂಕಾರ ಮಾಡಿರುವುದರ ಜತೆಗೆ ಇಡೀ ಮೈಸೂರು ಸುತ್ತುವರಿದಂತೆ ದೀಪಾಲಂಕಾರ ಮಾಡಿರುವ ಹಿನ್ನೆಲೆಯಲ್ಲಿ ನೋಡುಗರನ್ನು ಮತ್ತೆ ಮತ್ತೆ ಕಣ್ಮನ ಸೆಳೆಯುತ್ತಿದೆ. ನಾಲ್ಕು ಭಾಗಗಳಿಂದ ನಗರಕ್ಕೆ ಹಾದು ಬರುವ ನಾಲ್ಕು ಮಾರ್ಗದ ರಸ್ತೆಯ ೧೪೬ ಕಿ.ಮೀ ರಸ್ತೆ ಅಲ್ಲದೆ ನಗರದ ೧೧೧೩ ವೃತ್ತವನ್ನುಬೆಳಕಿನ ಮಯ ಮಾಡಿರುವುದರಿಂದ ಸಂಜೆ ವೇಳೆ ನೋಡುವುದೇ ಒಂದು ಚೆಂದವಾಗಿದೆ. ಈ ಬಾರಿಯೂ ವಿಶೇಷವಾಗಿಹಲವು ಮಾದರಿಗಳನ್ನು ರೂಪಿಸಿ ದೀಪಾಲಂಕಾರದ ಸೊಬಗನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ;ಮೈಸೂರು ದಸರಾಗೆ ಆಗಮಿಸುವ ನಾಡ ಜನತೆಗೆ ರೈಲ್ವೆ ಇಲಾಖೆಯಿಂದ ಬಿಗ್ ಗಿಫ್ಟ್

ದೇಶ ಮತ್ತು ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವ ದಸರಾ ಅಂಬಾರಿ, ಕೆಆರ್‌ಎಸ್ ಅಣೆಕಟ್ಟು, ಅಶೋಕ ಸ್ಥಂಭ, ನಡೆದಾಡುವ ದೇವರೆಂದೆ ಕರೆಸಿಕೊಂಡಿದ್ದ ಸಿದ್ಧಗಂಗಾಶ್ರೀ,ಬಸವಣ್ಣ, ಕನಕದಾಸ,ಅಂಬೇಡ್ಕರ್ ಮಾದರಿಗಳನ್ನು ಮಾಡಲಾಗಿದೆ.

ಪ್ರತಿಕೃತಿಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಿ ನಗರದ ನಾನಾ ಕಡೆ ನಿರ್ಮಿಸಿದೆ. ಇದಲ್ಲದೇ ಎಂದಿನಂತೆ ಈ ಬಾರಿಯೂ ಚಾಮುಂಡೇಶ್ವರಿ ದೇವಿ, ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್, ಸಂಸತ್ ಭವನ, ವಿಧಾನಸೌಧ ಪ್ರತಿಕೃತಿಗಳನ್ನು ನಿರ್ಮಿಸಿರುವುದು ಗಮನ ಸೆಳೆದಿದೆ. ಈ ಮಾರ್ಗದಲ್ಲಿ ಸಂಜೆಯಾದ ಬಳಿಕ ಓಡಾಡುವ ಪ್ರವಾಸಿಗರು, ಸ್ಥಳೀಯರು, ಯುವಕ-ಯುವತಿಯರು ಕೆಲಹೊತ್ತು ನಿಂತು ವೀಕ್ಷಿಸುವ ಜತೆಗೆ,ಅದರ ಮುಂದೆ ಸೆಲ್ಛಿ ಕ್ಲಿಕ್ಕಿಸಿಕೊಳ್ಳುತ್ತಿರುವುದು ಕಾಣಬಹುದು. ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ,ಡಿಸಿಎಂ,ಇಂಧನ ಸಚಿವರು,ಉಸ್ತುವಾರಿ ಸಚಿವರ ಭಾವಚಿತ್ರವನ್ನು ವಿದ್ಯುತ್‌ನಿಂದ ಕಂಗೊಳಿಸುವಂತೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

3 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

3 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

3 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

3 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

3 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

3 hours ago