ನಮ್ಮ ಮೈಸೂರ ದಸರಾ 2025

Mysuru Dasara | ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಅರಮನೆ ನಗರಿ

ಮೈಸೂರು : ನಾಡಹಬ್ಬ ವಿಶ್ವವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಅರಮನೆ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಝಗಮಗಿಸುವ ಮೂಲಕ ದೇಶ-ವಿದೇಶದ ಲಕ್ಷಾಂತರ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಪ್ರಮುಖ ವೃತ್ತ, ರಸ್ತೆಗಳಲ್ಲಿ ವಿಶಿಷ್ಠವಾಗಿ ಅಲಂಕಾರ ಮಾಡಿರುವುದರ ಜತೆಗೆ ಇಡೀ ಮೈಸೂರು ಸುತ್ತುವರಿದಂತೆ ದೀಪಾಲಂಕಾರ ಮಾಡಿರುವ ಹಿನ್ನೆಲೆಯಲ್ಲಿ ನೋಡುಗರನ್ನು ಮತ್ತೆ ಮತ್ತೆ ಕಣ್ಮನ ಸೆಳೆಯುತ್ತಿದೆ. ನಾಲ್ಕು ಭಾಗಗಳಿಂದ ನಗರಕ್ಕೆ ಹಾದು ಬರುವ ನಾಲ್ಕು ಮಾರ್ಗದ ರಸ್ತೆಯ ೧೪೬ ಕಿ.ಮೀ ರಸ್ತೆ ಅಲ್ಲದೆ ನಗರದ ೧೧೧೩ ವೃತ್ತವನ್ನುಬೆಳಕಿನ ಮಯ ಮಾಡಿರುವುದರಿಂದ ಸಂಜೆ ವೇಳೆ ನೋಡುವುದೇ ಒಂದು ಚೆಂದವಾಗಿದೆ. ಈ ಬಾರಿಯೂ ವಿಶೇಷವಾಗಿಹಲವು ಮಾದರಿಗಳನ್ನು ರೂಪಿಸಿ ದೀಪಾಲಂಕಾರದ ಸೊಬಗನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ;ಮೈಸೂರು ದಸರಾಗೆ ಆಗಮಿಸುವ ನಾಡ ಜನತೆಗೆ ರೈಲ್ವೆ ಇಲಾಖೆಯಿಂದ ಬಿಗ್ ಗಿಫ್ಟ್

ದೇಶ ಮತ್ತು ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವ ದಸರಾ ಅಂಬಾರಿ, ಕೆಆರ್‌ಎಸ್ ಅಣೆಕಟ್ಟು, ಅಶೋಕ ಸ್ಥಂಭ, ನಡೆದಾಡುವ ದೇವರೆಂದೆ ಕರೆಸಿಕೊಂಡಿದ್ದ ಸಿದ್ಧಗಂಗಾಶ್ರೀ,ಬಸವಣ್ಣ, ಕನಕದಾಸ,ಅಂಬೇಡ್ಕರ್ ಮಾದರಿಗಳನ್ನು ಮಾಡಲಾಗಿದೆ.

ಪ್ರತಿಕೃತಿಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಿ ನಗರದ ನಾನಾ ಕಡೆ ನಿರ್ಮಿಸಿದೆ. ಇದಲ್ಲದೇ ಎಂದಿನಂತೆ ಈ ಬಾರಿಯೂ ಚಾಮುಂಡೇಶ್ವರಿ ದೇವಿ, ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್, ಸಂಸತ್ ಭವನ, ವಿಧಾನಸೌಧ ಪ್ರತಿಕೃತಿಗಳನ್ನು ನಿರ್ಮಿಸಿರುವುದು ಗಮನ ಸೆಳೆದಿದೆ. ಈ ಮಾರ್ಗದಲ್ಲಿ ಸಂಜೆಯಾದ ಬಳಿಕ ಓಡಾಡುವ ಪ್ರವಾಸಿಗರು, ಸ್ಥಳೀಯರು, ಯುವಕ-ಯುವತಿಯರು ಕೆಲಹೊತ್ತು ನಿಂತು ವೀಕ್ಷಿಸುವ ಜತೆಗೆ,ಅದರ ಮುಂದೆ ಸೆಲ್ಛಿ ಕ್ಲಿಕ್ಕಿಸಿಕೊಳ್ಳುತ್ತಿರುವುದು ಕಾಣಬಹುದು. ಕಾಂಗ್ರೆಸ್ ಕಚೇರಿಯಲ್ಲಿ ಸಿಎಂ,ಡಿಸಿಎಂ,ಇಂಧನ ಸಚಿವರು,ಉಸ್ತುವಾರಿ ಸಚಿವರ ಭಾವಚಿತ್ರವನ್ನು ವಿದ್ಯುತ್‌ನಿಂದ ಕಂಗೊಳಿಸುವಂತೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago