ನಮ್ಮ ಮೈಸೂರ ದಸರಾ 2025

Mysuru Dasara | ನಾಳೆ ಏರ್‌ ಶೋ ಪೂರ್ವಭ್ಯಾಸ ; ಮತ್ತಷ್ಟು ಹೆಚ್ಚಲಿದೆ ದಸರಾ ಸಡಗರ

ಮೈಸೂರು : ಮೈಸೂರಿನಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ ಹಾಗೂ ವಾಯುಪಡೆ ಯೋಧರ ಸಾಹಸ ಪ್ರದರ್ಶನ ದಸರಾ ಸಡಗರವನ್ನು ಮತ್ತಷ್ಟು ಹೆಚ್ಚಿಸಲಿದೆ.

ಹತ್ತು ಹಲವು ಕಾರ್ಯಕ್ರಮಗಳು, ವಿದ್ಯುತ್ ದೀಪಾಲಂಕಾರದಿಂದ ಈಗಾಗಲೇ ದಸರಾ ಸಂಭ್ರಮ ಕಳೆಗಟ್ಟಿದೆ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಭಾರತೀಯ ವಾಯುಪಡೆ ಸಹಯೋಗದಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಬನ್ನಿಮಂಟಪದ ಮೈದಾನದಲ್ಲಿ ಗುರುವಾರ ಏರ್ ಶೋ ಪೂರ್ವಾಭ್ಯಾಸ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ವೈಮಾನಿಕ ಪ್ರದರ್ಶನ ಆಯೋಜಿಸುವಂತೆ ಮನವಿ ಮಾಡಿದ್ದರು. ಇದಲ್ಲದೆ, ಜಿಲ್ಲಾಡಳಿತವೂ ಸಹ ಪತ್ರ ವ್ಯವಹಾರ ಮಾಡಿತ್ತು. ಹಲವು ಬಾರಿ ಮನವಿ ಮಾಡಿದ್ದರಿಂದ ವಾಯುಪಡೆ ಒಪ್ಪಿಗೆ ಸೂಚಿಸಿದ್ದು, ಸೆ.೨೭ ಮತ್ತು ಅ.೧ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್ ಶೋ ಆಯೋಜಿಸಲಾಗಿದೆ.

ಇದನ್ನೂ ಓದಿ:-Mysuru Dasara | ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಅರಮನೆ ನಗರಿ 

ಭಾರತೀಯ ವಾಯುಪಡೆಯ ಯೋಧರು ಸುಮಾರು ೪೦ ನಿಮಿಷಗಳ ಕಾಲ ಏರ್ ಶೋ ನಡೆಸಲಿದ್ದಾರೆ. ಇದರಿಂದಾಗಿ ಗುರುವಾರ ಸಂಜೆ ೪ ಗಂಟೆಗೆ ಪೂರ್ವಾಭ್ಯಾಸ ನಡೆಯಲಿದೆ. ವಾಯುಪಡೆ ಸಿಬ್ಬಂದಿಯ ಒಪ್ಪಿಗೆ ಮೇರೆಗೆ ಸ್ಥಳಕ್ಕೆ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನ ಸೇವೆ ವ್ಯವಸ್ಥೆ ಮಾಡಲಾಗಿದೆ. ಬನ್ನಿಮಂಟಪ ಮೈದಾನದಲ್ಲಿ ಸ್ಥಳ ನಿಗಧಿಯಾಗಿದ್ದು, ಸ್ಥಳದಲ್ಲಿ ಧೂಳು ಬಾರದ ರೀತಿ ಹೆಚ್ಚು ನೀರನ್ನು ಸಿಂಪಡಿಸಲಾಗಿದೆ. ಅಲ್ಲಿಗೆ ಯಾವುದೇ ತಿಂಡಿ ತಿನಿಸು ತರಬಾರದು ಹಾಗೂ ಕಮಾಂಡರ್‌ಗಳು ಬಂದಾಗ ಅಲ್ಲಿ ಮಕ್ಕಳು ಫೋಟೋ ತೆಗೆದುಕೊಳ್ಳಲು ಮುಂದೆ ಹೋಗುತ್ತಾರೆ. ಅಂತಹ ಘಟನೆಗಳು ನಡೆಯದ ರೀತಿ ಪೊಲೀಸ್ ಸಿಬ್ಬಂದಿಗಳು ನೋಡಿಕೊಳ್ಳಬೇಕು. ಕಾರ್ಯಕ್ರಮ ನಿಗದಿತ ಸಮಯಕ್ಕೆ ಸರಿಯಾಗಿ ಆರಂಭವಾಗುವುದರಿಂದ ಪಾಸ್ ಹೊಂದಿರುವ ಸಾರ್ವಜನಿಕರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಸೀನರಾಗಿರಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

34 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

51 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago