air show
ಮೈಸೂರು : ಮೈಸೂರಿನಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ ಹಾಗೂ ವಾಯುಪಡೆ ಯೋಧರ ಸಾಹಸ ಪ್ರದರ್ಶನ ದಸರಾ ಸಡಗರವನ್ನು ಮತ್ತಷ್ಟು ಹೆಚ್ಚಿಸಲಿದೆ.
ಹತ್ತು ಹಲವು ಕಾರ್ಯಕ್ರಮಗಳು, ವಿದ್ಯುತ್ ದೀಪಾಲಂಕಾರದಿಂದ ಈಗಾಗಲೇ ದಸರಾ ಸಂಭ್ರಮ ಕಳೆಗಟ್ಟಿದೆ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಭಾರತೀಯ ವಾಯುಪಡೆ ಸಹಯೋಗದಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಬನ್ನಿಮಂಟಪದ ಮೈದಾನದಲ್ಲಿ ಗುರುವಾರ ಏರ್ ಶೋ ಪೂರ್ವಾಭ್ಯಾಸ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ವೈಮಾನಿಕ ಪ್ರದರ್ಶನ ಆಯೋಜಿಸುವಂತೆ ಮನವಿ ಮಾಡಿದ್ದರು. ಇದಲ್ಲದೆ, ಜಿಲ್ಲಾಡಳಿತವೂ ಸಹ ಪತ್ರ ವ್ಯವಹಾರ ಮಾಡಿತ್ತು. ಹಲವು ಬಾರಿ ಮನವಿ ಮಾಡಿದ್ದರಿಂದ ವಾಯುಪಡೆ ಒಪ್ಪಿಗೆ ಸೂಚಿಸಿದ್ದು, ಸೆ.೨೭ ಮತ್ತು ಅ.೧ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್ ಶೋ ಆಯೋಜಿಸಲಾಗಿದೆ.
ಇದನ್ನೂ ಓದಿ:-Mysuru Dasara | ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಅರಮನೆ ನಗರಿ
ಭಾರತೀಯ ವಾಯುಪಡೆಯ ಯೋಧರು ಸುಮಾರು ೪೦ ನಿಮಿಷಗಳ ಕಾಲ ಏರ್ ಶೋ ನಡೆಸಲಿದ್ದಾರೆ. ಇದರಿಂದಾಗಿ ಗುರುವಾರ ಸಂಜೆ ೪ ಗಂಟೆಗೆ ಪೂರ್ವಾಭ್ಯಾಸ ನಡೆಯಲಿದೆ. ವಾಯುಪಡೆ ಸಿಬ್ಬಂದಿಯ ಒಪ್ಪಿಗೆ ಮೇರೆಗೆ ಸ್ಥಳಕ್ಕೆ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನ ಸೇವೆ ವ್ಯವಸ್ಥೆ ಮಾಡಲಾಗಿದೆ. ಬನ್ನಿಮಂಟಪ ಮೈದಾನದಲ್ಲಿ ಸ್ಥಳ ನಿಗಧಿಯಾಗಿದ್ದು, ಸ್ಥಳದಲ್ಲಿ ಧೂಳು ಬಾರದ ರೀತಿ ಹೆಚ್ಚು ನೀರನ್ನು ಸಿಂಪಡಿಸಲಾಗಿದೆ. ಅಲ್ಲಿಗೆ ಯಾವುದೇ ತಿಂಡಿ ತಿನಿಸು ತರಬಾರದು ಹಾಗೂ ಕಮಾಂಡರ್ಗಳು ಬಂದಾಗ ಅಲ್ಲಿ ಮಕ್ಕಳು ಫೋಟೋ ತೆಗೆದುಕೊಳ್ಳಲು ಮುಂದೆ ಹೋಗುತ್ತಾರೆ. ಅಂತಹ ಘಟನೆಗಳು ನಡೆಯದ ರೀತಿ ಪೊಲೀಸ್ ಸಿಬ್ಬಂದಿಗಳು ನೋಡಿಕೊಳ್ಳಬೇಕು. ಕಾರ್ಯಕ್ರಮ ನಿಗದಿತ ಸಮಯಕ್ಕೆ ಸರಿಯಾಗಿ ಆರಂಭವಾಗುವುದರಿಂದ ಪಾಸ್ ಹೊಂದಿರುವ ಸಾರ್ವಜನಿಕರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಸೀನರಾಗಿರಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…