ನಮ್ಮ ಮೈಸೂರ ದಸರಾ 2025

Mysuru Dasara | ನಾಳೆ ಏರ್‌ ಶೋ ಪೂರ್ವಭ್ಯಾಸ ; ಮತ್ತಷ್ಟು ಹೆಚ್ಚಲಿದೆ ದಸರಾ ಸಡಗರ

ಮೈಸೂರು : ಮೈಸೂರಿನಲ್ಲಿ ದಸರಾ ಮಹೋತ್ಸವದ ಸಂಭ್ರಮ ಮನೆ ಮಾಡಿದ್ದು, ಬಾನಂಗಳದಲ್ಲಿ ಲೋಹದ ಹಕ್ಕಿಗಳ ಹಾರಾಟ ಹಾಗೂ ವಾಯುಪಡೆ ಯೋಧರ ಸಾಹಸ ಪ್ರದರ್ಶನ ದಸರಾ ಸಡಗರವನ್ನು ಮತ್ತಷ್ಟು ಹೆಚ್ಚಿಸಲಿದೆ.

ಹತ್ತು ಹಲವು ಕಾರ್ಯಕ್ರಮಗಳು, ವಿದ್ಯುತ್ ದೀಪಾಲಂಕಾರದಿಂದ ಈಗಾಗಲೇ ದಸರಾ ಸಂಭ್ರಮ ಕಳೆಗಟ್ಟಿದೆ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಭಾರತೀಯ ವಾಯುಪಡೆ ಸಹಯೋಗದಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಬನ್ನಿಮಂಟಪದ ಮೈದಾನದಲ್ಲಿ ಗುರುವಾರ ಏರ್ ಶೋ ಪೂರ್ವಾಭ್ಯಾಸ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ವೈಮಾನಿಕ ಪ್ರದರ್ಶನ ಆಯೋಜಿಸುವಂತೆ ಮನವಿ ಮಾಡಿದ್ದರು. ಇದಲ್ಲದೆ, ಜಿಲ್ಲಾಡಳಿತವೂ ಸಹ ಪತ್ರ ವ್ಯವಹಾರ ಮಾಡಿತ್ತು. ಹಲವು ಬಾರಿ ಮನವಿ ಮಾಡಿದ್ದರಿಂದ ವಾಯುಪಡೆ ಒಪ್ಪಿಗೆ ಸೂಚಿಸಿದ್ದು, ಸೆ.೨೭ ಮತ್ತು ಅ.೧ರಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್ ಶೋ ಆಯೋಜಿಸಲಾಗಿದೆ.

ಇದನ್ನೂ ಓದಿ:-Mysuru Dasara | ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಅರಮನೆ ನಗರಿ 

ಭಾರತೀಯ ವಾಯುಪಡೆಯ ಯೋಧರು ಸುಮಾರು ೪೦ ನಿಮಿಷಗಳ ಕಾಲ ಏರ್ ಶೋ ನಡೆಸಲಿದ್ದಾರೆ. ಇದರಿಂದಾಗಿ ಗುರುವಾರ ಸಂಜೆ ೪ ಗಂಟೆಗೆ ಪೂರ್ವಾಭ್ಯಾಸ ನಡೆಯಲಿದೆ. ವಾಯುಪಡೆ ಸಿಬ್ಬಂದಿಯ ಒಪ್ಪಿಗೆ ಮೇರೆಗೆ ಸ್ಥಳಕ್ಕೆ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನ ಸೇವೆ ವ್ಯವಸ್ಥೆ ಮಾಡಲಾಗಿದೆ. ಬನ್ನಿಮಂಟಪ ಮೈದಾನದಲ್ಲಿ ಸ್ಥಳ ನಿಗಧಿಯಾಗಿದ್ದು, ಸ್ಥಳದಲ್ಲಿ ಧೂಳು ಬಾರದ ರೀತಿ ಹೆಚ್ಚು ನೀರನ್ನು ಸಿಂಪಡಿಸಲಾಗಿದೆ. ಅಲ್ಲಿಗೆ ಯಾವುದೇ ತಿಂಡಿ ತಿನಿಸು ತರಬಾರದು ಹಾಗೂ ಕಮಾಂಡರ್‌ಗಳು ಬಂದಾಗ ಅಲ್ಲಿ ಮಕ್ಕಳು ಫೋಟೋ ತೆಗೆದುಕೊಳ್ಳಲು ಮುಂದೆ ಹೋಗುತ್ತಾರೆ. ಅಂತಹ ಘಟನೆಗಳು ನಡೆಯದ ರೀತಿ ಪೊಲೀಸ್ ಸಿಬ್ಬಂದಿಗಳು ನೋಡಿಕೊಳ್ಳಬೇಕು. ಕಾರ್ಯಕ್ರಮ ನಿಗದಿತ ಸಮಯಕ್ಕೆ ಸರಿಯಾಗಿ ಆರಂಭವಾಗುವುದರಿಂದ ಪಾಸ್ ಹೊಂದಿರುವ ಸಾರ್ವಜನಿಕರು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಸೀನರಾಗಿರಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

3 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago