ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಕುದುರೆಗಳಿಗೆ ಅಂತಿಮ ಹಂತದ ಸಿಡಿಮದ್ದು ಸಿಡಿಸುವ ತಾಲೀಮನ್ನು ನಡೆಸಲಾಯಿತು.
ಮೂರನೇ ಹಂತದ ತಾಲೀಮಿನಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ 14 ಆನೆಗಳು ಅಂದರೆ ಕ್ಯಾಪ್ಟನ್ ಅಭಿಮನ್ಯು, ಮಹೇಂದ್ರ, ಭೀಮಾ, ಪ್ರಶಾಂತ, ಲಕ್ಷ್ಮೀ, ಹೇಮಾವತಿ, ರೂಪ, ಕಾವೇರಿ, ಕಂಜನ್, ಏಕಲವ್ಯ, ಸುಗ್ರೀವ, ಶ್ರೀಕಂಠ, ಧನಂಜಯ, ಗೋಪಿ ಸೇರಿದಂತೆ 14 ಆನೆಗಳು ಸಿಡಿಮದ್ದು ತಾಲೀಮಿನಲ್ಲಿ ಭಾಗಿಯಾಗಿದ್ದವು.
ಇದನ್ನು ಓದಿ : ಬಾನು ಮುಷ್ತಾಕ್ ನಮ್ಮ ಸಂಪ್ರದಾಯದ ರೀತಿ ದಸರಾ ಉದ್ಘಾಟನೆ ಮಾಡಿದ್ದಾರೆ: ಶಾಸಕ ಶ್ರೀವತ್ಸ
7 ಪಿರಂಗಿ ಗಾಡಿಗಳ ಮೂಲಕ 21 ಸುತ್ತುಗಳ ಸಿಡಿಮದ್ದು ಸಿಡಿಸುವ ಮೂಲಕ ನಡೆದ ತಾಲೀಮಿನಲ್ಲಿ ದಸರಾ ಗಜಪಡೆ ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಕೊನೆಯ 3ನೇ ಹಂತದ ತಾಲೀಮಿನಲ್ಲಿ ಅಶ್ವಾರೋಹಿ ದಳದ 36ಕ್ಕೂ ಹೆಚ್ಚು ಕುದುರೆಗಳು ಭಾಗಿಯಾಗಿದ್ದವು.
ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಕ್ಯಾಪ್ಟನ್ ಅಭಿಮನ್ಯ ಜಂಬೂಸವಾರಿ ದಿನದಂದು ಚಿನ್ನದ ಅಂಬಾರಿ ಹೊತ್ತು ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದ್ದಾನೆ.
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…
ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ…