ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಕುದುರೆಗಳಿಗೆ ಅಂತಿಮ ಹಂತದ ಸಿಡಿಮದ್ದು ಸಿಡಿಸುವ ತಾಲೀಮನ್ನು ನಡೆಸಲಾಯಿತು.
ಮೂರನೇ ಹಂತದ ತಾಲೀಮಿನಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ 14 ಆನೆಗಳು ಅಂದರೆ ಕ್ಯಾಪ್ಟನ್ ಅಭಿಮನ್ಯು, ಮಹೇಂದ್ರ, ಭೀಮಾ, ಪ್ರಶಾಂತ, ಲಕ್ಷ್ಮೀ, ಹೇಮಾವತಿ, ರೂಪ, ಕಾವೇರಿ, ಕಂಜನ್, ಏಕಲವ್ಯ, ಸುಗ್ರೀವ, ಶ್ರೀಕಂಠ, ಧನಂಜಯ, ಗೋಪಿ ಸೇರಿದಂತೆ 14 ಆನೆಗಳು ಸಿಡಿಮದ್ದು ತಾಲೀಮಿನಲ್ಲಿ ಭಾಗಿಯಾಗಿದ್ದವು.
ಇದನ್ನು ಓದಿ : ಬಾನು ಮುಷ್ತಾಕ್ ನಮ್ಮ ಸಂಪ್ರದಾಯದ ರೀತಿ ದಸರಾ ಉದ್ಘಾಟನೆ ಮಾಡಿದ್ದಾರೆ: ಶಾಸಕ ಶ್ರೀವತ್ಸ
7 ಪಿರಂಗಿ ಗಾಡಿಗಳ ಮೂಲಕ 21 ಸುತ್ತುಗಳ ಸಿಡಿಮದ್ದು ಸಿಡಿಸುವ ಮೂಲಕ ನಡೆದ ತಾಲೀಮಿನಲ್ಲಿ ದಸರಾ ಗಜಪಡೆ ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಕೊನೆಯ 3ನೇ ಹಂತದ ತಾಲೀಮಿನಲ್ಲಿ ಅಶ್ವಾರೋಹಿ ದಳದ 36ಕ್ಕೂ ಹೆಚ್ಚು ಕುದುರೆಗಳು ಭಾಗಿಯಾಗಿದ್ದವು.
ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಕ್ಯಾಪ್ಟನ್ ಅಭಿಮನ್ಯ ಜಂಬೂಸವಾರಿ ದಿನದಂದು ಚಿನ್ನದ ಅಂಬಾರಿ ಹೊತ್ತು ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದ್ದಾನೆ.
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…
ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ' ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ.…
ಕೆ.ಬಿ.ರಮೇಶನಾಯಕ ವಿದ್ಯಾರಣ್ಯಪುರಂನ ಸಿವೇಜ್ ಫಾರಂನಲ್ಲಿ ಭರದಿಂದ ಸಾಗಿದ ಕಾಮಗಾರಿ ಮೈಸೂರು: ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸ್ಥಳೀಯ ನಿವಾಸಿಗಳಿಗೆ ಕಂಟಕವಾಗಿದ್ದ…
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…