ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಕುದುರೆಗಳಿಗೆ ಅಂತಿಮ ಹಂತದ ಸಿಡಿಮದ್ದು ಸಿಡಿಸುವ ತಾಲೀಮನ್ನು ನಡೆಸಲಾಯಿತು.
ಮೂರನೇ ಹಂತದ ತಾಲೀಮಿನಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ 14 ಆನೆಗಳು ಅಂದರೆ ಕ್ಯಾಪ್ಟನ್ ಅಭಿಮನ್ಯು, ಮಹೇಂದ್ರ, ಭೀಮಾ, ಪ್ರಶಾಂತ, ಲಕ್ಷ್ಮೀ, ಹೇಮಾವತಿ, ರೂಪ, ಕಾವೇರಿ, ಕಂಜನ್, ಏಕಲವ್ಯ, ಸುಗ್ರೀವ, ಶ್ರೀಕಂಠ, ಧನಂಜಯ, ಗೋಪಿ ಸೇರಿದಂತೆ 14 ಆನೆಗಳು ಸಿಡಿಮದ್ದು ತಾಲೀಮಿನಲ್ಲಿ ಭಾಗಿಯಾಗಿದ್ದವು.
ಇದನ್ನು ಓದಿ : ಬಾನು ಮುಷ್ತಾಕ್ ನಮ್ಮ ಸಂಪ್ರದಾಯದ ರೀತಿ ದಸರಾ ಉದ್ಘಾಟನೆ ಮಾಡಿದ್ದಾರೆ: ಶಾಸಕ ಶ್ರೀವತ್ಸ
7 ಪಿರಂಗಿ ಗಾಡಿಗಳ ಮೂಲಕ 21 ಸುತ್ತುಗಳ ಸಿಡಿಮದ್ದು ಸಿಡಿಸುವ ಮೂಲಕ ನಡೆದ ತಾಲೀಮಿನಲ್ಲಿ ದಸರಾ ಗಜಪಡೆ ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಕೊನೆಯ 3ನೇ ಹಂತದ ತಾಲೀಮಿನಲ್ಲಿ ಅಶ್ವಾರೋಹಿ ದಳದ 36ಕ್ಕೂ ಹೆಚ್ಚು ಕುದುರೆಗಳು ಭಾಗಿಯಾಗಿದ್ದವು.
ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಕ್ಯಾಪ್ಟನ್ ಅಭಿಮನ್ಯ ಜಂಬೂಸವಾರಿ ದಿನದಂದು ಚಿನ್ನದ ಅಂಬಾರಿ ಹೊತ್ತು ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದ್ದಾನೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…