ನಮ್ಮ ಮೈಸೂರ ದಸರಾ 2025

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಅಂತಿಮ ಹಂತದ ಸಿಡಿಮದ್ದು ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಇಂದು ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಕುದುರೆಗಳಿಗೆ ಅಂತಿಮ ಹಂತದ ಸಿಡಿಮದ್ದು ಸಿಡಿಸುವ ತಾಲೀಮನ್ನು ನಡೆಸಲಾಯಿತು.

ಮೂರನೇ ಹಂತದ ತಾಲೀಮಿನಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ 14 ಆನೆಗಳು ಅಂದರೆ ಕ್ಯಾಪ್ಟನ್‌ ಅಭಿಮನ್ಯು, ಮಹೇಂದ್ರ, ಭೀಮಾ, ಪ್ರಶಾಂತ, ಲಕ್ಷ್ಮೀ, ಹೇಮಾವತಿ, ರೂಪ, ಕಾವೇರಿ, ಕಂಜನ್, ಏಕಲವ್ಯ, ಸುಗ್ರೀವ, ಶ್ರೀಕಂಠ, ಧನಂಜಯ, ಗೋಪಿ ಸೇರಿದಂತೆ 14 ಆನೆಗಳು ಸಿಡಿಮದ್ದು ತಾಲೀಮಿನಲ್ಲಿ ಭಾಗಿಯಾಗಿದ್ದವು.

ಇದನ್ನು ಓದಿ : ಬಾನು ಮುಷ್ತಾಕ್ ನಮ್ಮ ಸಂಪ್ರದಾಯದ ರೀತಿ ದಸರಾ ಉದ್ಘಾಟನೆ ಮಾಡಿದ್ದಾರೆ: ಶಾಸಕ ಶ್ರೀವತ್ಸ

7 ಪಿರಂಗಿ ಗಾಡಿಗಳ ಮೂಲಕ 21 ಸುತ್ತುಗಳ ಸಿಡಿಮದ್ದು ಸಿಡಿಸುವ ಮೂಲಕ ನಡೆದ ತಾಲೀಮಿನಲ್ಲಿ ದಸರಾ ಗಜಪಡೆ ಬೆದರದೇ ನಿಂತಿದ್ದವು. ಕುಶಾಲತೋಪು ಸಿಡಿಸುವ ಕೊನೆಯ 3ನೇ ಹಂತದ ತಾಲೀಮಿನಲ್ಲಿ ಅಶ್ವಾರೋಹಿ ದಳದ 36ಕ್ಕೂ ಹೆಚ್ಚು ಕುದುರೆಗಳು ಭಾಗಿಯಾಗಿದ್ದವು.

ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಸರಾ ಗಜಪಡೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಕ್ಯಾಪ್ಟನ್‌ ಅಭಿಮನ್ಯ ಜಂಬೂಸವಾರಿ ದಿನದಂದು ಚಿನ್ನದ ಅಂಬಾರಿ ಹೊತ್ತು ರಾಜಬೀದಿಗಳಲ್ಲಿ ಹೆಜ್ಜೆ ಹಾಕಲಿದ್ದಾನೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago