ನಮ್ಮ ಮೈಸೂರ ದಸರಾ 2025

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ರೈತ ದಸರಾದಲ್ಲಿಂದು ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡನೇ ದಿನದ ರೈತ ದಸರಾದಲ್ಲಿಂದು ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ಮೈಸೂರು ನಗರದ ಜೆ.ಕೆ.ಗ್ರೌಂಡ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅಧಿಕ ಹಾಲು ಕರೆದ ಹಸುವಿಗೆ 1 ಲಕ್ಷ ಬಹುಮಾನ ಸಿಗಲಿದೆ. ಎರಡನೇ ಬಹುಮಾನ 80 ಸಾವಿರ ಸಿಗಲಿದ್ದು, ಮೂರನೇ ಬಹುಮಾನ 60 ಸಾವಿರ ರೂ ಸಿಗಲಿದೆ. ನಾಲ್ಕನೇ ಬಹುಮಾನವಾಗಿ 40 ಸಾವಿರ ನಿಗದಿಯಾಗಿದೆ.

ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಬಂದಿದ್ದ 15 ಎಚ್ಎಫ್ ರಾಸುಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದು ವಿಶೇಷವೆನಿಸಿತು.

ಇದನ್ನು ಓದಿ : ದಸರಾ: ಪ್ರವಾಸಿಗರಿಗೆ ಆರೋಗ್ಯ ಜಾಗೃತಿ, ತಪಾಸಣೆ

ಬೆಳಗ್ಗೆ 6.30ಕ್ಕೆ ಆರಂಭವಾದ ಹಾಲು ಕರೆಯುವ ಸ್ಪರ್ಧೆಯಲ್ಲಿ 20 ನಿಮಿಷಗಳ ಕಾಲಾವಕಾಶವನ್ನು ನಿಗದಿ ಮಾಡಲಾಗಿತ್ತು.

ಬೆಂಗಳೂರು ಆನೇಕಲ್‌ನ ಅಜಯ್ ಬಿನ್ ಪಾಪರೆಡ್ಡಿ ಅವರು, 21.5 ಕೆ.ಜಿ ಹಾಲು ಕರೆಯುವ ಮೂಲಕ ಮೊದಲ ಸ್ಥಾನ ಪಡೆದರೆ, ಪಿರಿಯಾಪಟ್ಟಣ ಚಿಟ್ಟೇನಹಳ್ಳಿ ಸಂಜೀವ್ ಶಿವೇಗೌಡ ಅವರು, 20 ಕೆ.ಜಿ 150 ಗ್ರಾಂ ಹಾಲು ಕರೆದು ಎರಡನೇ ಸ್ಥಾನ ಪಡೆದುಕೊಂಡರು.

ಮೈಸೂರಿನ ಬಂಡೀಪಾಳ್ಯದ ಚೇತನ್ ಶರ್ಮಾ ಬಂಡಿಪಾಳ್ಯ ಅವರು 19.4 ಕೆಜಿ ಮೂರನೇ ಸ್ಥಾನ ಪಡೆದು ಖುಷಿಪಟ್ಟರು.

ಸಂಜೆ ಮತ್ತೊಂದು ಸುತ್ತು ಹಾಲು ಕರೆದ ಬಳಿಕ ಪ್ರಶಸ್ತಿ ಘೋಷಣೆ ನಡೆಯಲಿದ್ದು, ಸಂಜೆಯೇ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

15 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

1 hour ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago