ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡನೇ ದಿನದ ರೈತ ದಸರಾದಲ್ಲಿಂದು ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.
ಮೈಸೂರು ನಗರದ ಜೆ.ಕೆ.ಗ್ರೌಂಡ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಅಧಿಕ ಹಾಲು ಕರೆದ ಹಸುವಿಗೆ 1 ಲಕ್ಷ ಬಹುಮಾನ ಸಿಗಲಿದೆ. ಎರಡನೇ ಬಹುಮಾನ 80 ಸಾವಿರ ಸಿಗಲಿದ್ದು, ಮೂರನೇ ಬಹುಮಾನ 60 ಸಾವಿರ ರೂ ಸಿಗಲಿದೆ. ನಾಲ್ಕನೇ ಬಹುಮಾನವಾಗಿ 40 ಸಾವಿರ ನಿಗದಿಯಾಗಿದೆ.
ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಬಂದಿದ್ದ 15 ಎಚ್ಎಫ್ ರಾಸುಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದು ವಿಶೇಷವೆನಿಸಿತು.
ಇದನ್ನು ಓದಿ : ದಸರಾ: ಪ್ರವಾಸಿಗರಿಗೆ ಆರೋಗ್ಯ ಜಾಗೃತಿ, ತಪಾಸಣೆ
ಬೆಳಗ್ಗೆ 6.30ಕ್ಕೆ ಆರಂಭವಾದ ಹಾಲು ಕರೆಯುವ ಸ್ಪರ್ಧೆಯಲ್ಲಿ 20 ನಿಮಿಷಗಳ ಕಾಲಾವಕಾಶವನ್ನು ನಿಗದಿ ಮಾಡಲಾಗಿತ್ತು.
ಬೆಂಗಳೂರು ಆನೇಕಲ್ನ ಅಜಯ್ ಬಿನ್ ಪಾಪರೆಡ್ಡಿ ಅವರು, 21.5 ಕೆ.ಜಿ ಹಾಲು ಕರೆಯುವ ಮೂಲಕ ಮೊದಲ ಸ್ಥಾನ ಪಡೆದರೆ, ಪಿರಿಯಾಪಟ್ಟಣ ಚಿಟ್ಟೇನಹಳ್ಳಿ ಸಂಜೀವ್ ಶಿವೇಗೌಡ ಅವರು, 20 ಕೆ.ಜಿ 150 ಗ್ರಾಂ ಹಾಲು ಕರೆದು ಎರಡನೇ ಸ್ಥಾನ ಪಡೆದುಕೊಂಡರು.
ಮೈಸೂರಿನ ಬಂಡೀಪಾಳ್ಯದ ಚೇತನ್ ಶರ್ಮಾ ಬಂಡಿಪಾಳ್ಯ ಅವರು 19.4 ಕೆಜಿ ಮೂರನೇ ಸ್ಥಾನ ಪಡೆದು ಖುಷಿಪಟ್ಟರು.
ಸಂಜೆ ಮತ್ತೊಂದು ಸುತ್ತು ಹಾಲು ಕರೆದ ಬಳಿಕ ಪ್ರಶಸ್ತಿ ಘೋಷಣೆ ನಡೆಯಲಿದ್ದು, ಸಂಜೆಯೇ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…