ನಮ್ಮ ಮೈಸೂರ ದಸರಾ 2025

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ರೈತ ದಸರಾದಲ್ಲಿಂದು ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡನೇ ದಿನದ ರೈತ ದಸರಾದಲ್ಲಿಂದು ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.

ಮೈಸೂರು ನಗರದ ಜೆ.ಕೆ.ಗ್ರೌಂಡ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅಧಿಕ ಹಾಲು ಕರೆದ ಹಸುವಿಗೆ 1 ಲಕ್ಷ ಬಹುಮಾನ ಸಿಗಲಿದೆ. ಎರಡನೇ ಬಹುಮಾನ 80 ಸಾವಿರ ಸಿಗಲಿದ್ದು, ಮೂರನೇ ಬಹುಮಾನ 60 ಸಾವಿರ ರೂ ಸಿಗಲಿದೆ. ನಾಲ್ಕನೇ ಬಹುಮಾನವಾಗಿ 40 ಸಾವಿರ ನಿಗದಿಯಾಗಿದೆ.

ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಬಂದಿದ್ದ 15 ಎಚ್ಎಫ್ ರಾಸುಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದು ವಿಶೇಷವೆನಿಸಿತು.

ಇದನ್ನು ಓದಿ : ದಸರಾ: ಪ್ರವಾಸಿಗರಿಗೆ ಆರೋಗ್ಯ ಜಾಗೃತಿ, ತಪಾಸಣೆ

ಬೆಳಗ್ಗೆ 6.30ಕ್ಕೆ ಆರಂಭವಾದ ಹಾಲು ಕರೆಯುವ ಸ್ಪರ್ಧೆಯಲ್ಲಿ 20 ನಿಮಿಷಗಳ ಕಾಲಾವಕಾಶವನ್ನು ನಿಗದಿ ಮಾಡಲಾಗಿತ್ತು.

ಬೆಂಗಳೂರು ಆನೇಕಲ್‌ನ ಅಜಯ್ ಬಿನ್ ಪಾಪರೆಡ್ಡಿ ಅವರು, 21.5 ಕೆ.ಜಿ ಹಾಲು ಕರೆಯುವ ಮೂಲಕ ಮೊದಲ ಸ್ಥಾನ ಪಡೆದರೆ, ಪಿರಿಯಾಪಟ್ಟಣ ಚಿಟ್ಟೇನಹಳ್ಳಿ ಸಂಜೀವ್ ಶಿವೇಗೌಡ ಅವರು, 20 ಕೆ.ಜಿ 150 ಗ್ರಾಂ ಹಾಲು ಕರೆದು ಎರಡನೇ ಸ್ಥಾನ ಪಡೆದುಕೊಂಡರು.

ಮೈಸೂರಿನ ಬಂಡೀಪಾಳ್ಯದ ಚೇತನ್ ಶರ್ಮಾ ಬಂಡಿಪಾಳ್ಯ ಅವರು 19.4 ಕೆಜಿ ಮೂರನೇ ಸ್ಥಾನ ಪಡೆದು ಖುಷಿಪಟ್ಟರು.

ಸಂಜೆ ಮತ್ತೊಂದು ಸುತ್ತು ಹಾಲು ಕರೆದ ಬಳಿಕ ಪ್ರಶಸ್ತಿ ಘೋಷಣೆ ನಡೆಯಲಿದ್ದು, ಸಂಜೆಯೇ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

27 mins ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

5 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

5 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

5 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

5 hours ago