ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಲು ಪಾರಂಪರಿಕ ನಡಿಗೆಯನ್ನು ಆಯೋಜನೆ ಮಾಡಲಾಗಿತ್ತು.
ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಆಯೋಜಿಸಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮದಲ್ಲಿ ಯುವಕ-ಯುವತಿಯರು ಪಾರಂಪರಿಕ ಕಟ್ಟಡಗಳ ಉಳಿವಿನ ಬಗ್ಗೆ ಪೋಸ್ಟರ್ ಹಿಡಿದು ಸಾಗಿದರು.
ನಗರದ ಟೌನ್ಹಾಲ್ನಿಂದ ಆರಂಭವಾದ ಪಾರಂಪರಿಕ ನಡಿಗೆಗೆ ನಗರಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಪಾರಂಪರಿಕ ನಡಿಗೆಯು 10ನೇ ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ವೃತ್ತ, ಕೆ.ಆರ್.ಆಸ್ಪತ್ರೆ, ಗಾಂಧಿ ವೃತ್ತದ ಮೂಲಕ ಮತ್ತೆ ಟೌನ್ ಹಾಲ್ಗೆ ಕೊನೆಗೊಂಡಿತು.
ಇದನ್ನು ಓದಿ : ಮೈಸೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ರ್ಯಾಲಿ
ಈ ಮೂಲಕ ಯುವ ಸಮೂಹವು ಮೈಸೂರಿನ ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಯಲು ಮುಂದಾಗಿದ್ದು, ಮಾರ್ಗಮಧ್ಯೆ ಸಿಗುವ ಕಟ್ಟಡಗಳ ಬಗ್ಗೆ ಯುವಕರಿಗೆ ಮಾಹಿತಿ ನೀಡಲಾಯಿತು.
ಪಾರಂಪರಿಕ ನಡಿಗೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳು ಪಾರಂಪರಿಕ ಕಟ್ಟಡಗಳ ಇತಿಹಾಸ, ವಾಸ್ತುಶಿಲ್ಪ ಶೈಲಿಯ ಮಹತ್ವ ತಿಳಿದುಕೊಂಡು ಖುಷಿಪಟ್ಟರು.
ಈ ವೇಳೆ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳ್ಳೆ ಅಯ್ಯಂಗಾರ್, ಡಾ.ರಂಗರಾಜು ಅವರು, ವಿದ್ಯಾರ್ಥಿಗಳಿಗೆ ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಿದರು.
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…
ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…