ನಮ್ಮ ಮೈಸೂರ ದಸರಾ 2025

ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ವಿದ್ಯಾರ್ಥಿಗಳಿಂದ ಪಾರಂಪರಿಕ ನಡಿಗೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಲು ಪಾರಂಪರಿಕ ನಡಿಗೆಯನ್ನು ಆಯೋಜನೆ ಮಾಡಲಾಗಿತ್ತು.

ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಆಯೋಜಿಸಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮದಲ್ಲಿ ಯುವಕ-ಯುವತಿಯರು ಪಾರಂಪರಿಕ ಕಟ್ಟಡಗಳ ಉಳಿವಿನ ಬಗ್ಗೆ ಪೋಸ್ಟರ್ ಹಿಡಿದು ಸಾಗಿದರು.

ನಗರದ ಟೌನ್‌ಹಾಲ್‌ನಿಂದ ಆರಂಭವಾದ ಪಾರಂಪರಿಕ ನಡಿಗೆಗೆ ನಗರಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಪಾರಂಪರಿಕ ನಡಿಗೆಯು 10ನೇ ಚಾಮರಾಜ ಒಡೆಯರ್ ವೃತ್ತ, ಕೆ.ಆರ್‌.ವೃತ್ತ, ಕೆ.ಆರ್‌.ಆಸ್ಪತ್ರೆ, ಗಾಂಧಿ ವೃತ್ತದ ಮೂಲಕ ಮತ್ತೆ ಟೌನ್ ಹಾಲ್‌ಗೆ ಕೊನೆಗೊಂಡಿತು.

ಇದನ್ನು ಓದಿ : ಮೈಸೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್‌ ರ್ಯಾಲಿ

ಈ ಮೂಲಕ ಯುವ ಸಮೂಹವು ಮೈಸೂರಿನ ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಯಲು ಮುಂದಾಗಿದ್ದು, ಮಾರ್ಗಮಧ್ಯೆ ಸಿಗುವ ಕಟ್ಟಡಗಳ ಬಗ್ಗೆ ಯುವಕರಿಗೆ ಮಾಹಿತಿ ನೀಡಲಾಯಿತು.

ಪಾರಂಪರಿಕ ನಡಿಗೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳು ಪಾರಂಪರಿಕ ಕಟ್ಟಡಗಳ ಇತಿಹಾಸ, ವಾಸ್ತುಶಿಲ್ಪ ಶೈಲಿಯ ಮಹತ್ವ ತಿಳಿದುಕೊಂಡು ಖುಷಿಪಟ್ಟರು.

ಈ ವೇಳೆ ಇತಿಹಾಸ ತಜ್ಞರಾದ ಡಾ.ಶೆಲ್ವಪಿಳ್ಳೆ ಅಯ್ಯಂಗಾರ್, ಡಾ.ರಂಗರಾಜು ಅವರು, ವಿದ್ಯಾರ್ಥಿಗಳಿಗೆ ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

2 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

2 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

2 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

2 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

2 hours ago