ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ನಿಂದ ಆಯೋಜಿಸಲಾಗುತ್ತಿರುವ ಡ್ರೋನ್ ಪ್ರದರ್ಶನ ಕಳೆದ ವರ್ಷ ನೋಡುಗರಿಗೆ ವಿಶೇಷ ಅನುಭವ ನೀಡಿತ್ತು. ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಈ ಡ್ರೋನ್ ಪ್ರದರ್ಶನ ಈ ಬಾರಿ ಇನ್ನಷ್ಟು ರೋಮಾಂಚನಕಾರಿಯಾಗಿರಲಿದೆ. ಸೆ.28ರಂದು ಸಂಜೆ 7 ಗಂಟೆಯಿಂದ ಡ್ರೋನ್ ಪ್ರದರ್ಶನ ನಡೆಯಲಿದ್ದು, ಇದಕ್ಕೂ ಮುನ್ನ ಸಾರ್ವಜನಿಕರ ಮನರಂಜನೆಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಯಿಂದ ಪಂಜಿನ ಕವಾಯತು ಮೈದಾನ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನು ಓದಿ: ಓದುಗರ ಪತ್ರ: ದಸರಾ ವಿದ್ಯುತ್ ದೀಪಾಲಂಕಾರ ವೀಕ್ಷಿಸುವಲ್ಲಿ ಜಾಗ್ರತೆ ಅಗತ್ಯ
ಈ ಬಾರಿ ಹೆಚ್ಚಿನ ಮೆರಗು:
ಸೆಸ್ಕ್ ವತಿಯಿಂದ ಕಳೆದ ವರ್ಷ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ದಸರಾ ಸಂಭ್ರಮಕ್ಕೆ ಹೊಸ ಮೆರಗು ನೀಡಿತ್ತು. 1500 ಡ್ರೋನ್ಗಳ ಮೂಲಕವಾಗಿ ನಡೆಸಲಾಗಿದ್ದ ಪ್ರದರ್ಶನದಲ್ಲಿ ಆಗಸದಲ್ಲಿ ವಿವಿಧ ವಿನ್ಯಾಸಗಳ 15ಕ್ಕೂ ಹೆಚ್ಚು ಬೆಳಕಿನ ಚಿತ್ತಾರಗಳನ್ನು ಮೂಡಿಸಲಾಗಿತ್ತು.
3000 ಡ್ರೋನ್ಗಳ ಬಳಕೆ:
ಡ್ರೋನ್ ಪ್ರದರ್ಶನಕ್ಕೆ ಮೊದಲ ಪ್ರಯತ್ನದಲ್ಲಿ ದೊರೆತ ಯಶಸ್ಸಿನ ಹಿನ್ನೆಲೆಯಲ್ಲಿ ಈ ಬಾರಿಯ ಪ್ರದರ್ಶನವನ್ನು ಮತ್ತಷ್ಟು ಆಕರ್ಷಣೀಯವಾಗಿ ಮಾಡಲು ಸೆಸ್ಕ್ ಸನ್ನದ್ಧವಾಗಿದೆ. ಈ ವರ್ಷದ ಡ್ರೋನ್ ಶೋನಲ್ಲಿ 3000 ಡ್ರೋನ್ಗಳನ್ನು ಬಳಸಿಕೊಂಡು ಪ್ರದರ್ಶನ ನೀಡಲಾಗುತ್ತಿದೆ. ಹೀಗಾಗಿ ಈ ಬಾರಿಯ ಡ್ರೋನ್ ಶೋ ಹೊಸತನ ಹಾಗೂ ಅತ್ಯಾಕರ್ಷಕವಾಗಿರಲಿದ್ದು, ನೋಡುಗರಿಗೆ ವಿಶಿಷ್ಟ ಅನುಭವವನ್ನು ನೀಡಲಿದೆ.
ಈ ಬಗ್ಗೆ ಮಾತನಾಡಿದ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು , “ಕಳೆದ ವರ್ಷ ಎಲ್ಲರನ್ನು ರಂಜಿಸಿದ್ದ ಡ್ರೋನ್ ಪ್ರದರ್ಶನ ಈ ಬಾರಿ ನಾಲ್ಕು ದಿನಗಳು ನಡೆಯಲಿದೆ. ಈ ಬಾರಿಯ ಪ್ರದರ್ಶನ ಹೆಚ್ಚು ಆಕರ್ಷಣೆಯಿಂದ ಕೂಡಿರಲಿದೆ. 3000 ಡ್ರೋನ್ಗಳನ್ನು ಬಳಸಿಕೊಂಡು ನೀಡಲಾಗುವ ಈ ಬಾರಿಯ ಪ್ರದರ್ಶನ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ನೀಡಲಿದೆ ಎಂದರು.
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…