ನಮ್ಮ ಮೈಸೂರ ದಸರಾ 2025

ದಸರಾ ಸಂಭ್ರಮಕ್ಕೆ ಹೊಸ ಮೆರಗು : ಸೆ.28,29 ರಂದು ಆಕರ್ಷಕ ಡ್ರೋನ್‌ ಪ್ರಾಯೋಗಿಕ ಪ್ರದರ್ಶನ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್‌ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ನಿಂದ ಆಯೋಜಿಸಲಾಗುತ್ತಿರುವ ಡ್ರೋನ್‌ ಪ್ರದರ್ಶನ ಕಳೆದ ವರ್ಷ ನೋಡುಗರಿಗೆ ವಿಶೇಷ ಅನುಭವ ನೀಡಿತ್ತು. ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಈ ಡ್ರೋನ್‌ ಪ್ರದರ್ಶನ ಈ ಬಾರಿ ಇನ್ನಷ್ಟು ರೋಮಾಂಚನಕಾರಿಯಾಗಿರಲಿದೆ. ಸೆ.28ರಂದು ಸಂಜೆ 7 ಗಂಟೆಯಿಂದ ಡ್ರೋನ್‌ ಪ್ರದರ್ಶನ ನಡೆಯಲಿದ್ದು, ಇದಕ್ಕೂ ಮುನ್ನ ಸಾರ್ವಜನಿಕರ ಮನರಂಜನೆಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಯಿಂದ ಪಂಜಿನ ಕವಾಯತು ಮೈದಾನ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನು ಓದಿ: ಓದುಗರ ಪತ್ರ:  ದಸರಾ ವಿದ್ಯುತ್ ದೀಪಾಲಂಕಾರ ವೀಕ್ಷಿಸುವಲ್ಲಿ ಜಾಗ್ರತೆ ಅಗತ್ಯ

ಈ ಬಾರಿ ಹೆಚ್ಚಿನ ಮೆರಗು:
ಸೆಸ್ಕ್‌ ವತಿಯಿಂದ ಕಳೆದ ವರ್ಷ ಆಯೋಜಿಸಿದ್ದ ಡ್ರೋನ್‌ ಪ್ರದರ್ಶನ ದಸರಾ ಸಂಭ್ರಮಕ್ಕೆ ಹೊಸ ಮೆರಗು ನೀಡಿತ್ತು. 1500 ಡ್ರೋನ್‌ಗಳ ಮೂಲಕವಾಗಿ ನಡೆಸಲಾಗಿದ್ದ ಪ್ರದರ್ಶನದಲ್ಲಿ ಆಗಸದಲ್ಲಿ ವಿವಿಧ ವಿನ್ಯಾಸಗಳ 15ಕ್ಕೂ ಹೆಚ್ಚು ಬೆಳಕಿನ‌ ಚಿತ್ತಾರಗಳನ್ನು ಮೂಡಿಸಲಾಗಿತ್ತು.

3000 ಡ್ರೋನ್‌ಗಳ ಬಳಕೆ:
ಡ್ರೋನ್‌ ಪ್ರದರ್ಶನಕ್ಕೆ ಮೊದಲ ಪ್ರಯತ್ನದಲ್ಲಿ ದೊರೆತ ಯಶಸ್ಸಿನ ಹಿನ್ನೆಲೆಯಲ್ಲಿ ಈ ಬಾರಿಯ ಪ್ರದರ್ಶನವನ್ನು ಮತ್ತಷ್ಟು ಆಕರ್ಷಣೀಯವಾಗಿ ಮಾಡಲು ಸೆಸ್ಕ್‌ ಸನ್ನದ್ಧವಾಗಿದೆ. ಈ ವರ್ಷದ ಡ್ರೋನ್‌ ಶೋನಲ್ಲಿ 3000 ಡ್ರೋನ್‌ಗಳನ್ನು ಬಳಸಿಕೊಂಡು ಪ್ರದರ್ಶನ ನೀಡಲಾಗುತ್ತಿದೆ. ಹೀಗಾಗಿ ಈ ಬಾರಿಯ ಡ್ರೋನ್‌ ಶೋ ಹೊಸತನ ಹಾಗೂ ಅತ್ಯಾಕರ್ಷಕವಾಗಿರಲಿದ್ದು, ನೋಡುಗರಿಗೆ ವಿಶಿಷ್ಟ ಅನುಭವವನ್ನು ನೀಡಲಿದೆ.

ಈ ಬಗ್ಗೆ ಮಾತನಾಡಿದ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ,  “ಕಳೆದ ವರ್ಷ ಎಲ್ಲರನ್ನು ರಂಜಿಸಿದ್ದ ಡ್ರೋನ್‌ ಪ್ರದರ್ಶನ ಈ ಬಾರಿ ನಾಲ್ಕು ದಿನಗಳು ನಡೆಯಲಿದೆ. ಈ ಬಾರಿಯ ಪ್ರದರ್ಶನ ಹೆಚ್ಚು ಆಕರ್ಷಣೆಯಿಂದ ಕೂಡಿರಲಿದೆ. 3000 ಡ್ರೋನ್‌ಗಳನ್ನು ಬಳಸಿಕೊಂಡು ನೀಡಲಾಗುವ ಈ ಬಾರಿಯ ಪ್ರದರ್ಶನ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ನೀಡಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

5 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

5 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

5 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

5 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

5 hours ago