ನಮ್ಮ ಮೈಸೂರ ದಸರಾ 2025

ದಸರಾ ಸಂಭ್ರಮಕ್ಕೆ ಹೊಸ ಮೆರಗು : ಸೆ.28,29 ರಂದು ಆಕರ್ಷಕ ಡ್ರೋನ್‌ ಪ್ರಾಯೋಗಿಕ ಪ್ರದರ್ಶನ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್‌ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ನಿಂದ ಆಯೋಜಿಸಲಾಗುತ್ತಿರುವ ಡ್ರೋನ್‌ ಪ್ರದರ್ಶನ ಕಳೆದ ವರ್ಷ ನೋಡುಗರಿಗೆ ವಿಶೇಷ ಅನುಭವ ನೀಡಿತ್ತು. ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಈ ಡ್ರೋನ್‌ ಪ್ರದರ್ಶನ ಈ ಬಾರಿ ಇನ್ನಷ್ಟು ರೋಮಾಂಚನಕಾರಿಯಾಗಿರಲಿದೆ. ಸೆ.28ರಂದು ಸಂಜೆ 7 ಗಂಟೆಯಿಂದ ಡ್ರೋನ್‌ ಪ್ರದರ್ಶನ ನಡೆಯಲಿದ್ದು, ಇದಕ್ಕೂ ಮುನ್ನ ಸಾರ್ವಜನಿಕರ ಮನರಂಜನೆಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಯಿಂದ ಪಂಜಿನ ಕವಾಯತು ಮೈದಾನ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನು ಓದಿ: ಓದುಗರ ಪತ್ರ:  ದಸರಾ ವಿದ್ಯುತ್ ದೀಪಾಲಂಕಾರ ವೀಕ್ಷಿಸುವಲ್ಲಿ ಜಾಗ್ರತೆ ಅಗತ್ಯ

ಈ ಬಾರಿ ಹೆಚ್ಚಿನ ಮೆರಗು:
ಸೆಸ್ಕ್‌ ವತಿಯಿಂದ ಕಳೆದ ವರ್ಷ ಆಯೋಜಿಸಿದ್ದ ಡ್ರೋನ್‌ ಪ್ರದರ್ಶನ ದಸರಾ ಸಂಭ್ರಮಕ್ಕೆ ಹೊಸ ಮೆರಗು ನೀಡಿತ್ತು. 1500 ಡ್ರೋನ್‌ಗಳ ಮೂಲಕವಾಗಿ ನಡೆಸಲಾಗಿದ್ದ ಪ್ರದರ್ಶನದಲ್ಲಿ ಆಗಸದಲ್ಲಿ ವಿವಿಧ ವಿನ್ಯಾಸಗಳ 15ಕ್ಕೂ ಹೆಚ್ಚು ಬೆಳಕಿನ‌ ಚಿತ್ತಾರಗಳನ್ನು ಮೂಡಿಸಲಾಗಿತ್ತು.

3000 ಡ್ರೋನ್‌ಗಳ ಬಳಕೆ:
ಡ್ರೋನ್‌ ಪ್ರದರ್ಶನಕ್ಕೆ ಮೊದಲ ಪ್ರಯತ್ನದಲ್ಲಿ ದೊರೆತ ಯಶಸ್ಸಿನ ಹಿನ್ನೆಲೆಯಲ್ಲಿ ಈ ಬಾರಿಯ ಪ್ರದರ್ಶನವನ್ನು ಮತ್ತಷ್ಟು ಆಕರ್ಷಣೀಯವಾಗಿ ಮಾಡಲು ಸೆಸ್ಕ್‌ ಸನ್ನದ್ಧವಾಗಿದೆ. ಈ ವರ್ಷದ ಡ್ರೋನ್‌ ಶೋನಲ್ಲಿ 3000 ಡ್ರೋನ್‌ಗಳನ್ನು ಬಳಸಿಕೊಂಡು ಪ್ರದರ್ಶನ ನೀಡಲಾಗುತ್ತಿದೆ. ಹೀಗಾಗಿ ಈ ಬಾರಿಯ ಡ್ರೋನ್‌ ಶೋ ಹೊಸತನ ಹಾಗೂ ಅತ್ಯಾಕರ್ಷಕವಾಗಿರಲಿದ್ದು, ನೋಡುಗರಿಗೆ ವಿಶಿಷ್ಟ ಅನುಭವವನ್ನು ನೀಡಲಿದೆ.

ಈ ಬಗ್ಗೆ ಮಾತನಾಡಿದ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ,  “ಕಳೆದ ವರ್ಷ ಎಲ್ಲರನ್ನು ರಂಜಿಸಿದ್ದ ಡ್ರೋನ್‌ ಪ್ರದರ್ಶನ ಈ ಬಾರಿ ನಾಲ್ಕು ದಿನಗಳು ನಡೆಯಲಿದೆ. ಈ ಬಾರಿಯ ಪ್ರದರ್ಶನ ಹೆಚ್ಚು ಆಕರ್ಷಣೆಯಿಂದ ಕೂಡಿರಲಿದೆ. 3000 ಡ್ರೋನ್‌ಗಳನ್ನು ಬಳಸಿಕೊಂಡು ನೀಡಲಾಗುವ ಈ ಬಾರಿಯ ಪ್ರದರ್ಶನ ಪ್ರೇಕ್ಷಕರಿಗೆ ರೋಮಾಂಚನಕಾರಿ ಅನುಭವ ನೀಡಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

1 hour ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

5 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

6 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

12 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

12 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

12 hours ago