ನಮ್ಮ ಮೈಸೂರ ದಸರಾ 2025

ಹಳೇ ವೈಷಮ್ಯ : ಚಿಕ್ಕಪ್ಪನನ್ನೇ ಹತ್ಯೆಗೈದ ಅಣ್ಣನ ಮಕ್ಕಳು

ಮಂಡ್ಯ : ತನ್ನ ತಂದೆಯ ಮೇಲೆ ಹಲ್ಲೆ ನಡೆಸಿದ ಎಂಬ ಕಾರಣಕ್ಕೆ ಇಬ್ಬರು ಮಕ್ಕಳು ಸೇರಿಕೊಂಡು ತನ್ನ ಚಿಕ್ಕಪ್ಪನನ್ನೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಕೆರಗೋಡು ಹೋಬಳಿ ಬಿ.ಹೊಸೂರು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ವಿಜಯನಗರ ಜಿಲ್ಲೆ, ಹೊಸಪೇಟೆ ತಾಲ್ಲೂಕು ಕೂಡ್ಲಗಿಯ ಬಿ.ಪಿ.ತಾಂಡ ನಿವಾಸಿ ಬಸೀರ್ ಸಾಬ್ (೩೦) ಎಂಬಾತನನ್ನು ಅಣ್ಣನ ಮಕ್ಕಳಾದ ಅಲ್ಲಾ ಭಕ್ಷಾ, ಅಮಾನ್ ಎಂಬವರೇ ಹತ್ಯೆಗೈದ ಆರೋಪಿಗಳಾಗಿದ್ದಾರೆ.

ಕಬ್ಬು ಕಡಿಯುವ ಕೆಲಸಕ್ಕೆಂದು ಬಸೀರ್ ಸಾಬ್ ಹಾಗೂ ಈತನ ಅಣ್ಣ ಜಾಕೀರ್ ಸಾಬ್ ಅವರು ಹೊಸಪೇಟೆ ತಾಲ್ಲೂಕು ಕೂಡ್ಲಗಿಯ ಬಿ.ಪಿ. ತಾಂಡಾದಿಂದ ಬಿ.ಹೊಸೂರು ಗ್ರಾಮಕ್ಕೆ ಬಂದಿದ್ದರು.

ಇದನ್ನು ಓದಿ ;  ಪತ್ನಿ ಜೊತೆ ಸಂಬಂಧ ಶಂಕೆ : ಮಗನಿಂದಲೇ ತಂದೆಯ ಹತ್ಯೆ

ಕಳೆದ ಐದಾರು ತಿಂಗಳ ಹಿಂದೆ ಜಾಕೀರ್ ಸಾಬ್ ಬಸೀರ್ ಸಾಬ್‌ನನ್ನು ಕಬ್ಬು ಕಡಿಯಲೆಂದು ಗಂಟಗೌಡನಹಳ್ಳಿಗೆ ಕರೆಸಿಕೊಂಡಿದ್ದನು. ಗ್ರಾಮದ ಸ್ವಾಮಿ ಎಂಬವರ ಆಲೆಮನೆ ಹತ್ತಿರ ಶೆಡ್ಡು ಹಾಕಿಕೊಂಡು ವಾಸಿಸುತ್ತಿದ್ದರು. ಎರಡು ತಿಂಗಳ ಹಿಂದೆ ಸಣ್ಣ ವಿಚಾರಕ್ಕೆ ಅಣ್ಣ ತಮ್ಮಂದಿರ ನಡುವೆ ಜಗಳವಾಗಿ, ಬಶೀರ್ ಸಾಬ್ ಜಾಕೀರ್ ಸಾಬ್ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಗಂಟಗೌಡನಹಳ್ಳಿಯಿಂದ ಬಿ.ಹೊಸೂರಿನ ಚಂದ್ರಣ್ಣ ಎಂಬವರ ಆಲೆಮನೆಗೆ ಬಂದು ಕೆಲಸಕ್ಕೆ ಸೇರಿಕೊಂಡು ಅಲ್ಲೇ ವಾಸವಾಗಿದ್ದರು.

ಜಾಕೀರ್ ಸಾಬ್‌ಗೆ ಬಶೀರ್ ಸಾಬ್ ಹಲ್ಲೆ ನಡೆಸಿದ್ದರಿಂದ ಜಾಕೀರ್ ಸಾಬ್‌ನ ಮಕ್ಕಳಾದ ಅಲ್ಲಾ ಭಕ್ಷಾ, ಅಮಾನ್ ಅವರು ದ್ವೇಷ ಸಾಽಸಿ ಸೆ.೩೦ರ ಮಧ್ಯಾಹ್ನ ಬಸೀರ್‌ಸಾಬ್ ಬಿಳಿದೇಗಲು ಗ್ರಾಮದಲ್ಲಿ ಮದ್ಯಪಾನ ಮಾಡಲು ಹೋಗಿದ್ದಾಗ ಜಗಳ ಮಾಡಿದ್ದಾರೆ. ದ್ವೇಷ ಸಾಧಿಸಿಕೊಂಡು ಅದೇ ದಿನ ರಾತ್ರಿ ೧೧ರ ಸಮಯದಲ್ಲಿ ಬಿ.ಹೊಸೂರು ಗ್ರಾಮದಲ್ಲಿದ್ದ ಶೆಡ್‌ಗೆ ಬಂದು ಮಲಗಿದ್ದ ಬಶೀರ್ ಸಾಬ್‌ನನ್ನು ಎಬ್ಬಿಸಿ ಕಬ್ಬು ಕಡಿಯುವ ದರಾಂತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.

ಇದನ್ನು ನೋಡಿದ ಬಶೀರ್ ಸಾಬ್‌ನ ಪತ್ನಿ ರೇಷ್ಮಾ ಕೂಗಿಕೊಂಡಾಗ ಪಕ್ಕದ ಮನೆಯ ಜಗಣ್ಣ ಹಾಗೂ ನೆರೆಹೊರೆಯವರು ಬರುತ್ತಿದ್ದಂತೆ ಆರೋಪಿಗಳಾದ ಅಲ್ಲಾ ಭಕ್ಷಾ ಹಾಗೂ ಅಮಾನ್ ಅವರು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಬಶೀರ್ ಸಾಬ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬಶೀರ್ ಸಾಬ್‌ನ ಪತ್ನಿ ರೇಷ್ಮಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಕೆರಗೋಡು ಪೊಲೀಸರು, ಆರೋಪಿಗಳಾದ ಅಲ್ಲಾ ಭಕ್ಷಾ ಹಾಗೂ ಅಮಾನ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

9 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

10 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

11 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

11 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

12 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

14 hours ago