ನಮ್ಮ ಮೈಸೂರ ದಸರಾ 2025

ನನ್ನ ಹೆಸರಲ್ಲೇ ಶಿವ ರಾಮ ಇದ್ದಾರೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಬಾನು ಮುಷ್ತಾಕ್‌ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಲೇಖಕಿ ಹಾಗೂ ಹೋರಾಟಗಾರ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಮುಸ್ಲಿಂ ಸಮುದಾಯಕ್ಕೆ ಸೇರಿದ್ರು ಕನ್ನಡ ಲೇಖಕಿ ಹೋರಾಟಗಾರ್ತಿ. ಅನೇಕ ಸಂಘಟನೆಗಳ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಬಾನು ಮುಸ್ತಾಕ್ ಧೀಮಂತ ಮಹಿಳೆ. ಸಾಹಿತ್ಯದಲ್ಲಿ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಸಿಕ್ಕಿರೋದು ಇದೆ ಮೊದಲು. ದೀಪಾ ಬಸ್ತಿ ಬಾನು ಮುಸ್ತಾಕ್ ಇಬ್ಬರನ್ನು ಸರ್ಕಾರದಿಂದ ಗೌರವಿಸಿದ್ದೇವೆ.

ಬಾನು ಮುಸ್ತಾಕ್ ದಸರಾ ಉದ್ಘಾಟನೆಯನ್ನ ಕೆಲವರು ವಿರೋಧ ಮಾಡಿದ್ರು. ದಸರಾ ನಾಡ ಹಬ್ಬ ಇದು ಎಲ್ಲರು ಸೇರಿ ಮಾಡುವ ದಸರಾ. ಇದನ್ನ ವಿರೋಧ ಮಾಡೋರು ದಡ್ಡರು ಮೂರ್ಖರು. ಇದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋದ್ರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಂವಿಧಾನ ಸರಿಯಾಗಿ ಓದಿ ಅಂತ ಹೇಳ್ತು. ನನ್ನ ಹೆಸರಿನಲ್ಲಿ ಇಬ್ಬರು ದೇವರಿದ್ದಾರೆ. ಶಿವ ರಾಮ ಇಬ್ಬರು ಇದ್ದಾರೆ. ನಾನು ಹಿಂದೂ ಅಲ್ವಾ. ಪ್ರತಾಪ್ ಸಿಂಹಗಿಂತಲು ಹಿಂದೂ ನಾನು ಎಂದು ಪ್ರತಾಪ್‌ ಸಿಂಹ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

17 hours ago