ನಮ್ಮ ಮೈಸೂರ ದಸರಾ 2025

ನನ್ನ ಹೆಸರಲ್ಲೇ ಶಿವ ರಾಮ ಇದ್ದಾರೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಬಾನು ಮುಷ್ತಾಕ್‌ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಲೇಖಕಿ ಹಾಗೂ ಹೋರಾಟಗಾರ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಮುಸ್ಲಿಂ ಸಮುದಾಯಕ್ಕೆ ಸೇರಿದ್ರು ಕನ್ನಡ ಲೇಖಕಿ ಹೋರಾಟಗಾರ್ತಿ. ಅನೇಕ ಸಂಘಟನೆಗಳ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಬಾನು ಮುಸ್ತಾಕ್ ಧೀಮಂತ ಮಹಿಳೆ. ಸಾಹಿತ್ಯದಲ್ಲಿ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಸಿಕ್ಕಿರೋದು ಇದೆ ಮೊದಲು. ದೀಪಾ ಬಸ್ತಿ ಬಾನು ಮುಸ್ತಾಕ್ ಇಬ್ಬರನ್ನು ಸರ್ಕಾರದಿಂದ ಗೌರವಿಸಿದ್ದೇವೆ.

ಬಾನು ಮುಸ್ತಾಕ್ ದಸರಾ ಉದ್ಘಾಟನೆಯನ್ನ ಕೆಲವರು ವಿರೋಧ ಮಾಡಿದ್ರು. ದಸರಾ ನಾಡ ಹಬ್ಬ ಇದು ಎಲ್ಲರು ಸೇರಿ ಮಾಡುವ ದಸರಾ. ಇದನ್ನ ವಿರೋಧ ಮಾಡೋರು ದಡ್ಡರು ಮೂರ್ಖರು. ಇದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋದ್ರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಂವಿಧಾನ ಸರಿಯಾಗಿ ಓದಿ ಅಂತ ಹೇಳ್ತು. ನನ್ನ ಹೆಸರಿನಲ್ಲಿ ಇಬ್ಬರು ದೇವರಿದ್ದಾರೆ. ಶಿವ ರಾಮ ಇಬ್ಬರು ಇದ್ದಾರೆ. ನಾನು ಹಿಂದೂ ಅಲ್ವಾ. ಪ್ರತಾಪ್ ಸಿಂಹಗಿಂತಲು ಹಿಂದೂ ನಾನು ಎಂದು ಪ್ರತಾಪ್‌ ಸಿಂಹ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago