ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಐದನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದು ಪೊಲೀಸ್ ಬ್ಯಾಂಡ್ ಅದ್ಧೂರಿಯಾಗಿ ಜರುಗಿತು.
ಅರಮನೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಬಂದ ಪೊಲೀಸ್ ಸಮೂಹ ವಾದ್ಯವೃಂದದಿಂದ ಗಾನಸುಧೆ ಏರ್ಪಟ್ಟಿತು. ಪೋಲೀಸ್ ಬ್ಯಾಂಡ್ ಸಂಗೀತ ರಸಸಂಜೆಯು ಪ್ರೇಕ್ಷಕರಿಗೆ ಮುದ ನೀಡಿತು.
ಕರ್ನಾಟಕ, ಆಂಗ್ಲ ಪೋಲೀಸ್ ಬ್ಯಾಂಡ್ ಸಾಂಸ್ಕೃತಿಕ ಸಂಗೀತ ಉಣ ಬಡಿಸಿದ್ದು, ಪ್ರಸಿದ್ಧ ಸಂಗೀತ ಲಹರಿಗಳನ್ನು ನುಡಿಸುವ ಮುಖಾಂತರ ನೆರೆದಿದ್ದ ಜನರನ್ನು ಮನರಂಜನೆಗೊಳಿಸಲಾಯಿತು.
ಇದನ್ನೂ ಓದಿ:-ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್
ಪೊಲೀಸರು ವಿಂಡ್ ಮಾರ್ಚ್, ವಂದೇ ಮಾತರಂ, ಕಾಯೇ ದುರ್ಗಿ, ಸಂಗೀತ ಕೃತಿಗಳ ನುಡಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಮಡದಿಯ ಜೊತೆ ಕೂತು ಪೊಲೀಸ್ ಬ್ಯಾಂಡ್ ಆಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಶ್ರೀವತ್ಸ, ಎಂಎಲ್ಸಿ ಡಾ.ಶಿವಕುಮಾರ್, ಪೊಲೀಸ್ ಮಹಾ ನಿರ್ದೇಶಕ ಸಲೀಂ, ಪೋಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ನೂರಾರು ಜನ ಸಾರ್ವಜನಿಕರು ಭಾಗಿಯಾಗಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…