ನಮ್ಮ ಮೈಸೂರ ದಸರಾ 2025

ಯಶಸ್ವಿ ದಸರಾ ಆಯೋಜನೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಸಿಎಂ

ಮೈಸೂರು : ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ತಿಳಿಸಿದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು.

ಇದನ್ನು ಓದಿ : ಮೈಸೂರು ದಸರಾ: ಆರನೇ ಬಾರಿ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು

ದಸರಾ ಯಶಸ್ವೀ ಆಯೋಜನೆ ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

1 hour ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

2 hours ago