ನಮ್ಮ ಮೈಸೂರ ದಸರಾ 2025

ನಾಡಿನಿಂದ ಕಾಡಿಗೆ ಮರಳಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಿಗೆ ಆಗಮಿಸಿದ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು ಯಶಸ್ವಿಯಾಗಿ ಮುಗಿಸಿ ಇಂದು ಕಾಡಿನತ್ತ ಪಯಣ ಬೆಳೆಸಿದವು.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಗೊಳಿಸಿದ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಇಂದು ನಾಡಿನಿಂದ ಬೀಳ್ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಅರಮನೆ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮೊದಲಿಗೆ ದಸರಾ ಗಜಪಡೆಗಳಾದ ಅಭಿಮನ್ಯು, ಭೀಮ, ಧನಂಜಯ, ಪ್ರಶಾಂತ, ಶ್ರೀಕಂಠ, ಸುಗ್ರೀವ, ಏಕಲವ್ಯ, ಮಹೇಂದ್ರ, ಗೋಪಿ, ಕಂಜನ್, ಹೇಮಾವತಿ, ರೂಪ, ಕಾವೇರಿ ಹಾಗೂ ಲಕ್ಷ್ಮೀ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಹಣ್ಣು-ಹಂಪಲು ಹಾಗೂ ಕಬ್ಬನ್ನು ನೀಡಲಾಯಿತು. ಬಳಿಕ ಆನೆಗಳನ್ನು ಒಂದೊಂದರಂತೆ ಲಾರಿಗೆ ಹತ್ತಿಸಿ ಬೀಳ್ಕೊಡಲಾಯಿತು.

ಇದನ್ನೂ ಓದಿ:-ಖ್ಯಾತ ಸಾಹಿತಿ ಡಾ.ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ

ಅಲ್ಲಿ ನೆರೆದಿದ್ದ ಸಾರ್ವಜನಿಕರು, ಅಭಿಮಾನಿಗಳು, ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ ದಸರಾ ಗಜಪಡೆಯನ್ನು ಲಾರಿಗೆ ಹತ್ತಿಸಿ ಒಲ್ಲದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು.

ಕಾಡಿನಿಂದ ನಾಡಿಗೆ ಬಂದಿದ್ದ ಮಾವುತರು, ಕಾವಾಡಿಗರ ಕುಟುಂಬವು ಸಹ ಬೇಸರದಿಂದಲೇ ತಮ್ಮ ಬ್ಯಾಗುಗಳನ್ನು ಎತ್ತಿಕೊಂಡು ತಮ್ಮ ತಮ್ಮ ಸ್ವಸ್ಥಾನಕ್ಕೆ ಮರಳಿದರು.

ಈ ವೇಳೆ ಡಿಸಿಎಫ್‌ ಪ್ರಭುಗೌಡ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

2 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

3 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

4 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

4 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

4 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

4 hours ago