ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಿಗೆ ಆಗಮಿಸಿದ ಕಳೆದ ಎರಡು ತಿಂಗಳಿನಿಂದ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಜಂಬೂಸವಾರಿಯನ್ನು ಯಶಸ್ವಿಯಾಗಿ ಮುಗಿಸಿ ಇಂದು ಕಾಡಿನತ್ತ ಪಯಣ ಬೆಳೆಸಿದವು.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಗೊಳಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯನ್ನು ಇಂದು ನಾಡಿನಿಂದ ಬೀಳ್ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅರಮನೆ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮೊದಲಿಗೆ ದಸರಾ ಗಜಪಡೆಗಳಾದ ಅಭಿಮನ್ಯು, ಭೀಮ, ಧನಂಜಯ, ಪ್ರಶಾಂತ, ಶ್ರೀಕಂಠ, ಸುಗ್ರೀವ, ಏಕಲವ್ಯ, ಮಹೇಂದ್ರ, ಗೋಪಿ, ಕಂಜನ್, ಹೇಮಾವತಿ, ರೂಪ, ಕಾವೇರಿ ಹಾಗೂ ಲಕ್ಷ್ಮೀ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಹಣ್ಣು-ಹಂಪಲು ಹಾಗೂ ಕಬ್ಬನ್ನು ನೀಡಲಾಯಿತು. ಬಳಿಕ ಆನೆಗಳನ್ನು ಒಂದೊಂದರಂತೆ ಲಾರಿಗೆ ಹತ್ತಿಸಿ ಬೀಳ್ಕೊಡಲಾಯಿತು.
ಇದನ್ನೂ ಓದಿ:-ಖ್ಯಾತ ಸಾಹಿತಿ ಡಾ.ಮೊಗಳ್ಳಿ ಗಣೇಶ್ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ
ಅಲ್ಲಿ ನೆರೆದಿದ್ದ ಸಾರ್ವಜನಿಕರು, ಅಭಿಮಾನಿಗಳು, ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿ ದಸರಾ ಗಜಪಡೆಯನ್ನು ಲಾರಿಗೆ ಹತ್ತಿಸಿ ಒಲ್ಲದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು.
ಕಾಡಿನಿಂದ ನಾಡಿಗೆ ಬಂದಿದ್ದ ಮಾವುತರು, ಕಾವಾಡಿಗರ ಕುಟುಂಬವು ಸಹ ಬೇಸರದಿಂದಲೇ ತಮ್ಮ ಬ್ಯಾಗುಗಳನ್ನು ಎತ್ತಿಕೊಂಡು ತಮ್ಮ ತಮ್ಮ ಸ್ವಸ್ಥಾನಕ್ಕೆ ಮರಳಿದರು.
ಈ ವೇಳೆ ಡಿಸಿಎಫ್ ಪ್ರಭುಗೌಡ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…
ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…
ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…
ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…
ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…
ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…