ನಮ್ಮ ಮೈಸೂರ ದಸರಾ 2025

ರಾಷ್ಟ್ರೀಯ ಭಾವೈಕ್ಯತೆ, ಕನ್ನಡ ವೈಭವಕ್ಕೆ ಸಾಕ್ಷಿಯಾದ ಮೂರನೇ ದಿನದ ಯುವ ಸಂಭ್ರಮ

ಮೈಸೂರು : ಸಂವಿಧಾನದ ಮಹತ್ವ, ದೇಶದ ಯೋಧರ ಕೆಚ್ಚೆದೆಯ ಹೋರಾಟ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕನ್ನಡ ವೈಭವಕ್ಕೆ ಸಾಕ್ಷಿಯಾಗಿದ್ದು ದಸರಾ ಮಹೋತ್ಸವದ ಆಕರ್ಷಣಿಯ ಕೇಂದ್ರವಾದ ಯುವ ಸಂಭ್ರಮ. ಇವೆಲ್ಲವೂ ಮೂರನೇ ದಿನದ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯದಲ್ಲಿ ಅನಾವರಣ ಗೊಂಡವು.

ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಶುಕ್ರವಾರ ಸಂಜೆ ನಡೆದ ಸಾಂಸ್ಕೃತಿಕ ಹಬ್ಬ ಯುವ ಜನತೆಯಲ್ಲಿ ನಾಡು-ನುಡಿಯ ಬಗ್ಗೆ ಅಭಿಮಾನದೊಂದಿಗೆ ದೇಶ ಭಕ್ತಿಯ ಕಿಚ್ಚನ್ನು ಹಚ್ಚುವಂತೆ ಮಾಡಿತು.

ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯ ಸ್ಮರಣೆ, ಕನ್ನಡ ನಾಡು ನುಡಿ, ರಾಷ್ಟ್ರೀಯ ಭಾವೈಕ್ಯತೆಯ ಜಪ, ಭಾರತೀಯ ಯೋಧರ ಸ್ಮರಣೆಯೊಂದಿಗೆ ಜೈ ಜವಾನ್, ಜೈ ಕಿಸಾನ್ ಘೋಷಣೆಗಳು ಮೊಳಗಿದವು. ಬೆಂಗಳೂರು ಕೆಂಗೇರಿ ಸರ್ಕಾರಿ ಪ್ರಥಮ ದರ್ಜೆ ಪರಿಸರ ಸಂರಕ್ಷಣೆ ಎಂಬ ನೃತ್ಯಕ್ಕೆ ಹೆಜ್ಜೆ ಹಾಕಿದರು, ಮೈಸೂರು ಹಿನಕಲ್ ಮೈಸೂರು ರೂರಲ್ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಮೈಸೂರು ರಾಜರ ಕೊಡುಗೆಯ ಬಗ್ಗೆ ತಿಳಿಸಿದರು, ಹುಣಸೂರು ಟ್ಯಾಲೆಂಟ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪೌರಾಣಿಕ ನೃತ್ಯ ಎಲ್ಲರೂ ಗಮನ ಸೆಳೆದರೆ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿಗಳು ಭಾರತೀಯ ಸಾಂಸ್ಕೃತಿಕ ನೃತ್ಯಕ್ಕೆ ಹೆಜ್ಜೆ ಹಾಕಿದರು.

ಕಾರ್ಯಕ್ರಮದಲ್ಲಿ 59 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ಅಯೋಧ್ಯ ಶ್ರೀರಾಮ ಶಿಲ್ಪಿ ಮೈಸೂರಿನ ಹೆಮ್ಮೆಯ ಅರುಣ್ ಯೋಗಿರಾಜ್, ಮೈಸೂರು ದಸರಾ ವೈಭವ ಅಂದು ಇಂದು, ದೇಶ ಕಾಯುವ ಯೋಧನ ಬಗ್ಗೆ, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೀಗೆ ನಾನಾ ಕಾಲೇಜು ತಂಡಗಳು ಕನ್ನಡ ನಾಡು ನುಡಿ ಯೊಂದಿಗೆ ಕರ್ನಾಟಕದ ಜಾನಪದ ವೈವಿಧ್ಯತೆ ಮತ್ತು ಪರಂಪರೆಯನ್ನು ಬಿಂಬಿಸುವ ನೃತ್ಯಗಳನ್ನು ಮಾಡುವ ಮೂಲಕ ಗಮನ ಸೆಳೆದವು.

ಆಂದೋಲನ ಡೆಸ್ಕ್

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

5 seconds ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

40 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago