ಮೈಸೂರು : ಸಂವಿಧಾನದ ಮಹತ್ವ, ದೇಶದ ಯೋಧರ ಕೆಚ್ಚೆದೆಯ ಹೋರಾಟ, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕನ್ನಡ ವೈಭವಕ್ಕೆ ಸಾಕ್ಷಿಯಾಗಿದ್ದು ದಸರಾ ಮಹೋತ್ಸವದ ಆಕರ್ಷಣಿಯ ಕೇಂದ್ರವಾದ ಯುವ ಸಂಭ್ರಮ. ಇವೆಲ್ಲವೂ ಮೂರನೇ ದಿನದ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯದಲ್ಲಿ ಅನಾವರಣ ಗೊಂಡವು.
ದಸರಾ ಮಹೋತ್ಸವದ ಅಂಗವಾಗಿ ನಗರದ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಶುಕ್ರವಾರ ಸಂಜೆ ನಡೆದ ಸಾಂಸ್ಕೃತಿಕ ಹಬ್ಬ ಯುವ ಜನತೆಯಲ್ಲಿ ನಾಡು-ನುಡಿಯ ಬಗ್ಗೆ ಅಭಿಮಾನದೊಂದಿಗೆ ದೇಶ ಭಕ್ತಿಯ ಕಿಚ್ಚನ್ನು ಹಚ್ಚುವಂತೆ ಮಾಡಿತು.
ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯ ಸ್ಮರಣೆ, ಕನ್ನಡ ನಾಡು ನುಡಿ, ರಾಷ್ಟ್ರೀಯ ಭಾವೈಕ್ಯತೆಯ ಜಪ, ಭಾರತೀಯ ಯೋಧರ ಸ್ಮರಣೆಯೊಂದಿಗೆ ಜೈ ಜವಾನ್, ಜೈ ಕಿಸಾನ್ ಘೋಷಣೆಗಳು ಮೊಳಗಿದವು. ಬೆಂಗಳೂರು ಕೆಂಗೇರಿ ಸರ್ಕಾರಿ ಪ್ರಥಮ ದರ್ಜೆ ಪರಿಸರ ಸಂರಕ್ಷಣೆ ಎಂಬ ನೃತ್ಯಕ್ಕೆ ಹೆಜ್ಜೆ ಹಾಕಿದರು, ಮೈಸೂರು ಹಿನಕಲ್ ಮೈಸೂರು ರೂರಲ್ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಮೈಸೂರು ರಾಜರ ಕೊಡುಗೆಯ ಬಗ್ಗೆ ತಿಳಿಸಿದರು, ಹುಣಸೂರು ಟ್ಯಾಲೆಂಟ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪೌರಾಣಿಕ ನೃತ್ಯ ಎಲ್ಲರೂ ಗಮನ ಸೆಳೆದರೆ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿಗಳು ಭಾರತೀಯ ಸಾಂಸ್ಕೃತಿಕ ನೃತ್ಯಕ್ಕೆ ಹೆಜ್ಜೆ ಹಾಕಿದರು.
ಕಾರ್ಯಕ್ರಮದಲ್ಲಿ 59 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ಅಯೋಧ್ಯ ಶ್ರೀರಾಮ ಶಿಲ್ಪಿ ಮೈಸೂರಿನ ಹೆಮ್ಮೆಯ ಅರುಣ್ ಯೋಗಿರಾಜ್, ಮೈಸೂರು ದಸರಾ ವೈಭವ ಅಂದು ಇಂದು, ದೇಶ ಕಾಯುವ ಯೋಧನ ಬಗ್ಗೆ, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೀಗೆ ನಾನಾ ಕಾಲೇಜು ತಂಡಗಳು ಕನ್ನಡ ನಾಡು ನುಡಿ ಯೊಂದಿಗೆ ಕರ್ನಾಟಕದ ಜಾನಪದ ವೈವಿಧ್ಯತೆ ಮತ್ತು ಪರಂಪರೆಯನ್ನು ಬಿಂಬಿಸುವ ನೃತ್ಯಗಳನ್ನು ಮಾಡುವ ಮೂಲಕ ಗಮನ ಸೆಳೆದವು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…