ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರಗಳು ಮೆರುಗು ನೀಡುತ್ತಿವೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗುತ್ತಿವೆ.
ಇದನ್ನು ಓದಿ : ಮೈಸೂರು: ಚಿನ್ನದ ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ಸಜ್ಜು
31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ, ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು, 27 ರಾಜ್ಯ, ಕೇಂದ್ರ ಇಲಾಖಾವಾರು, ನಿಗಮ ಮಂಡಳಿ ಮತ್ತು ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ಸಾಗುತ್ತಿವೆ.
ಹೆಚ್ಎಎಲ್, ಕೆ.ಎಸ್.ಆರ್.ಟಿಸಿ, ಆರೋಗ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು, ಕಾವೇರಿ ನೀರಾವರಿ ನಿಗಮದಿಂದ ಮುಂದಿನ ಜಲ ಸಂಪತ್ತಿನ ಮಹತ್ವ, ಉಪಯೋಗದ ಬಗ್ಗೆ ಸಂದೇಶ ಸಾರುತ್ತಿವೆ. ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಗಳ ಬಗ್ಗೆ ವಿವರಣೆ ನೀಡುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಅಲ್ಲಿನ ಕಲೆ ಸಂಸ್ಕೃತಿ ಬಿಂಬಿಸುವ ಟ್ಯಾಬ್ಲೋ ಮೆರವಣಿಗೆಯಲ್ಲಿ ಸಾಗುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…