ಮೈಸೂರು: ಮೈಸೂರಿನಲ್ಲಿ ಒಂದು ಕಡೆ ದಸರಾ ಮಹೋತ್ಸವ ಕಾರ್ಯಕ್ರಮಗಳು ಜನರನ್ನು ಅಕರ್ಷಣೆ ಮಾಡಿದ್ರೆ ಮತ್ತೊಂದು ಕಡೆ ವಿಂಟೇಜ್ ಕಾರುಗಳು ಎಲ್ಲರನ್ನು ಅಕರ್ಷಣೆ ಮಾಡುತ್ತಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಗೋಪಿನಾಥ್ ಅವರು ಕಳೆದ 4 ವರ್ಷದಿಂದ ವಿಂಟೇಜ್ ಕಾರುಗಳನ್ನು ಪ್ರದರ್ಶನ ಮಾಡಿಕೊಂಡು ಬರುತ್ತಿದ್ದಾರೆ.
ಇದನ್ನು ಓದಿ : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೃಹತ್ ಕೇಕ್ ಶೋ ಆಯೋಜನೆ
ಈ ವರ್ಷ ಸುಮಾರು 50ಕ್ಕೂ ಹೆಚ್ಚಿನ ಅಪರೂಪದ ಕಾರುಗಳು 40ಕ್ಕೂ ಹೆಚ್ಚಿನ ಬೈಕ್ಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಸೆಪ್ಟೆಂಬರ್ 26ರವರೆಗೆ ಈ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆ ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
1909 ರಿಂದ 1970 ರವರೆಗಿನ ವಿಂಟೇಜ್ ಕಾರುಗಳನ್ನು ಪ್ರದರ್ಶನ ಮಾಡಲಾಗಿದ್ದು, ವಿಶೇಷವಾಗಿ ಜಿಪಿಡಬ್ಲೂ, ಯುಎಸ್ ಆರ್ಮಿ ಟ್ರಕ್, 1970ರ ಲ್ಯಾಂಡ್ ರೋವರ್ ಸರಣಿ 3, 1949 ರ ಬೆಡ್ ಫೋರ್ಡ್ 1937 ಮರ್ಸಿಡಿಸ್ ಬೆಂಜ್ ವೋಕ್ಸ್ ವ್ಯಾಗನ್ ಬೀಟಲ್ ಸೇರಿದಂತೆ 40ಕ್ಕೂ ಹೆಚ್ಚಿನ ಹಳೆಯ ಪ್ರಮುಖ ಬೈಕ್ಗಳನ್ನು ಪ್ರದರ್ಶನಕ್ಕಿಡಲಾಗಿದೆ.
ಈ ವಿಂಟೇಜ್ ಕಾರುಗಳ ಪ್ರದರ್ಶನವನ್ನು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಉದ್ಘಾಟನೆ ಮಾಡಿದರು. ನಂತರ ಅಪರೂಪದ ಹಳೆಯ ಕಾರುಗಳನ್ನು ಅರುಣ್ ಯೋಗಿರಾಜ್ ಅವರು ಚಾಲನೆ ಮಾಡಿ ಖುಷಿಪಟ್ಟರು.
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…
ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…