ಮೈಸೂರು: ಮೈಸೂರಿನಲ್ಲಿ ಒಂದು ಕಡೆ ದಸರಾ ಮಹೋತ್ಸವ ಕಾರ್ಯಕ್ರಮಗಳು ಜನರನ್ನು ಅಕರ್ಷಣೆ ಮಾಡಿದ್ರೆ ಮತ್ತೊಂದು ಕಡೆ ವಿಂಟೇಜ್ ಕಾರುಗಳು ಎಲ್ಲರನ್ನು ಅಕರ್ಷಣೆ ಮಾಡುತ್ತಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಗೋಪಿನಾಥ್ ಅವರು ಕಳೆದ 4 ವರ್ಷದಿಂದ ವಿಂಟೇಜ್ ಕಾರುಗಳನ್ನು ಪ್ರದರ್ಶನ ಮಾಡಿಕೊಂಡು ಬರುತ್ತಿದ್ದಾರೆ.
ಇದನ್ನು ಓದಿ : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೃಹತ್ ಕೇಕ್ ಶೋ ಆಯೋಜನೆ
ಈ ವರ್ಷ ಸುಮಾರು 50ಕ್ಕೂ ಹೆಚ್ಚಿನ ಅಪರೂಪದ ಕಾರುಗಳು 40ಕ್ಕೂ ಹೆಚ್ಚಿನ ಬೈಕ್ಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ. ಸೆಪ್ಟೆಂಬರ್ 26ರವರೆಗೆ ಈ ಪ್ರದರ್ಶನವನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆ ಉಚಿತವಾಗಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
1909 ರಿಂದ 1970 ರವರೆಗಿನ ವಿಂಟೇಜ್ ಕಾರುಗಳನ್ನು ಪ್ರದರ್ಶನ ಮಾಡಲಾಗಿದ್ದು, ವಿಶೇಷವಾಗಿ ಜಿಪಿಡಬ್ಲೂ, ಯುಎಸ್ ಆರ್ಮಿ ಟ್ರಕ್, 1970ರ ಲ್ಯಾಂಡ್ ರೋವರ್ ಸರಣಿ 3, 1949 ರ ಬೆಡ್ ಫೋರ್ಡ್ 1937 ಮರ್ಸಿಡಿಸ್ ಬೆಂಜ್ ವೋಕ್ಸ್ ವ್ಯಾಗನ್ ಬೀಟಲ್ ಸೇರಿದಂತೆ 40ಕ್ಕೂ ಹೆಚ್ಚಿನ ಹಳೆಯ ಪ್ರಮುಖ ಬೈಕ್ಗಳನ್ನು ಪ್ರದರ್ಶನಕ್ಕಿಡಲಾಗಿದೆ.
ಈ ವಿಂಟೇಜ್ ಕಾರುಗಳ ಪ್ರದರ್ಶನವನ್ನು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಉದ್ಘಾಟನೆ ಮಾಡಿದರು. ನಂತರ ಅಪರೂಪದ ಹಳೆಯ ಕಾರುಗಳನ್ನು ಅರುಣ್ ಯೋಗಿರಾಜ್ ಅವರು ಚಾಲನೆ ಮಾಡಿ ಖುಷಿಪಟ್ಟರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…