ಮೈಸೂರು: ಗ್ಯಾರಂಟಿ ಯೋಜನೆಗಳನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ, ಜೆಡಿಎಸ್ನವರು ಗ್ಯಾರಂಟಿ ಯೋಜನೆ ಲಾಭ ಪಡೆಯಲ್ವಾ? ಎಂದು ಪ್ರಶ್ನಿಸಿದರು. ಎಲ್ಲಾ ಜನರಿಗಾಗಿ ಗ್ಯಾರಂಟಿ ಯೋಜನೆ ತಂದಿದ್ದೇವೆ.ಗುಡಿ, ಚರ್ಚ್, ಮಸೀದಿ ಬಿಟ್ಟು ಹೊರ ಬನ್ನಿ ಎಂದು ಕುವೆಂಪು ಹೇಳಿದ್ದಾರೆ. ಧರ್ಮದ ಆಧಾರದ ಮೇಲೆ ಜಾತಿ ಆಧಾರದ ಮೇಲೆ ಸಮಾಜ ಒಡೆಯಬಾರದು.
ಇದು ನಾಡಿನ ಜನರ ಹಬ್ಬ. ಇದು ಒಂದು ಧರ್ಮ, ಒಂದು ಜಾತಿ ಹಬ್ಬ ಅಲ್ಲ. ಗ್ಯಾರಂಟಿ ಮುಂದುವರಿಸಿದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಕೊಂಕು ಆಡಿದರು. ಈಗ ರಾಜ್ಯವೇನೂ ದಿವಾಳಿ ಆಗಿದ್ದೆಯಾ? ಯಾರು ಗ್ಯಾರಂಟಿ ವಿರೋಧ ಮಾಡಿದರು ಅವರೇ ಇದನ್ನು ಕಾಪಿ ಮಾಡೋಕೆ ಶುರು ಮಾಡಿದ್ದಾರೆ.
ಕರ್ನಾಟಕ ತಲಾ ಆದಾಯದಲ್ಲಿ ಹೆಚ್ಚಳವಾಗಿದೆ. ಕರ್ನಾಟಕ ತಲಾ ಆದಾಯ ಹೆಚ್ಚಳದಲ್ಲಿ ಇಡೀ ದೇಶದಲ್ಲೇ ನಂಬರ್ ಓನ್. ಗ್ಯಾರಂಟಿ ಯೋಜನೆಯಿಂದ ಎಲ್ಲರ ಆದಾಯ ಹೆಚ್ಚಳವಾಗಿದೆ ಎಂದು ಹೇಳಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…