ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು.
ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸುವ ಎರಡನೇ ಹಂತದ ತಾಲೀಮು ಯಶಸ್ವಿಯಾಗಿ ನೆರವೇರಿತು.
ಇದನ್ನೂ ಓದಿ: ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 1,425 ಹುದ್ದೆಗಳು
ಅರಮನೆಯ ಫಿರಂಗಿಗಾಡಿಗಳಿಂದ ಕುಶಾಲತೋಪು ಸಿಡಿಸಿದ ತಾಲೀಮಿನಲ್ಲಿ ಎಲ್ಲಾ 14 ಆನೆಗಳು, ಅಶ್ವಾರೋಹಿ ದಳ ಭಾಗಿಯಾಗಿದ್ದವು. ಎರಡನೇ ಬಾರಿಯೂ ಹೇಮಾವತಿ, ರೂಪ ಮತ್ತು ಶ್ರೀಕಂಠ ಆನೆಗಳು ಕುಶಾಲತೋಪು ಸಿಡಿತದ ತಾಲೀಮಿನಲ್ಲಿ ಭಾಗವಹಿಸಿದ್ದವು.
ಸಿಡಿಮದ್ದು ತಾಲೀಮು ಫೈರಿಂಗ್ ಕಾರ್ಯದಲ್ಲಿ ಭಾಗಿಯಾಗಿದ್ದ 30ಕ್ಕೂ ಹೆಚ್ಚು ಸಿಎಆರ್ ಪೊಲೀಸರು ಏಳು ಫಿರಂಗಿ ಗಾಡಿಗಳಿಂದ, ತಲಾ ಮೂರು ಬಾರಿಯಂತೆ ಒಟ್ಟು 21 ಕುಶಾಲತೋಪುಗಳನ್ನು ಸಿಡಿಸಿದರು.
ದಸರಾ ಗಜಪಡೆ ಕುಶಾಲತೋಪು ಸಿಡಿತದ ಸದ್ದಿಗೆ ಬೆದರದೇ ಆತ್ಮಸ್ಥೈರ್ಯ ಪ್ರದರ್ಶಿಸಿದ್ದು, ಅಶ್ವಾರೋಹಿ ದಳದ ಕೆಲ ಕುದುರೆಗಳು ಮಾತ್ರ ಸಿಡಿಮದ್ದಿನ ಸದ್ದಿಗೆ ವಿಚಲಿತವಾದವು.
2ನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್, ಸಿಎಫ್ ರವಿಶಂಕರ್, ಡಿಸಿಎಫ್ ಡಾ. ಪ್ರಭುಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…