ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ 2ನೇ ಹಂತದ ಸಿಡಿಮದ್ದು ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು.

ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸುವ ಎರಡನೇ ಹಂತದ ತಾಲೀಮು ಯಶಸ್ವಿಯಾಗಿ ‌ನೆರವೇರಿತು.

ಇದನ್ನೂ ಓದಿ: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 1,425 ಹುದ್ದೆಗಳು

ಅರಮನೆಯ ಫಿರಂಗಿಗಾಡಿಗಳಿಂದ ಕುಶಾಲತೋಪು ಸಿಡಿಸಿದ ತಾಲೀಮಿನಲ್ಲಿ ಎಲ್ಲಾ 14 ಆನೆಗಳು, ಅಶ್ವಾರೋಹಿ ದಳ ಭಾಗಿಯಾಗಿದ್ದವು. ಎರಡನೇ ಬಾರಿಯೂ ಹೇಮಾವತಿ, ರೂಪ ಮತ್ತು ಶ್ರೀಕಂಠ ಆನೆಗಳು ಕುಶಾಲತೋಪು ಸಿಡಿತದ ತಾಲೀಮಿನಲ್ಲಿ ಭಾಗವಹಿಸಿದ್ದವು.

ಸಿಡಿಮದ್ದು ತಾಲೀಮು ಫೈರಿಂಗ್ ಕಾರ್ಯದಲ್ಲಿ ಭಾಗಿಯಾಗಿದ್ದ 30ಕ್ಕೂ ಹೆಚ್ಚು ಸಿಎಆರ್ ಪೊಲೀಸರು ಏಳು ಫಿರಂಗಿ ಗಾಡಿಗಳಿಂದ, ತಲಾ ಮೂರು ಬಾರಿಯಂತೆ ಒಟ್ಟು 21 ಕುಶಾಲತೋಪುಗಳನ್ನು ಸಿಡಿಸಿದರು.

ದಸರಾ ಗಜಪಡೆ ಕುಶಾಲತೋಪು ಸಿಡಿತದ ಸದ್ದಿಗೆ ಬೆದರದೇ ಆತ್ಮಸ್ಥೈರ್ಯ ಪ್ರದರ್ಶಿಸಿದ್ದು, ಅಶ್ವಾರೋಹಿ ದಳದ ಕೆಲ ಕುದುರೆಗಳು ಮಾತ್ರ ಸಿಡಿಮದ್ದಿನ ಸದ್ದಿಗೆ ವಿಚಲಿತವಾದವು.

2ನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್, ಸಿಎಫ್ ರವಿಶಂಕರ್, ಡಿಸಿಎಫ್ ಡಾ. ಪ್ರಭುಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…

1 hour ago

ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…

1 hour ago

ಕೇರಳದಲ್ಲಿ 3 ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…

1 hour ago

ಫಲಪುಷ್ಪ ವಸ್ತು ಪ್ರದರ್ಶನವನ್ನು ಜಿಲ್ಲೆಯ ಸಾರ್ವಜನಿಕರು ಕಣ್ತುಂಬಿಕೊಳ್ಳಿ: ಎನ್.ಚಲುವರಾಯಸ್ವಾಮಿ ಕರೆ

ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…

1 hour ago

ಮೈಸೂರು| ಬಣ್ಣ ಹೊಡೆಯುವ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್‌ ರಸ್ತೆಯಲ್ಲಿರುವ…

2 hours ago

ಸಂಜೆ 6 ರಿಂದ ಬೆಳಗಿನ ಜಾವ 6ರವರೆಗೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಿಷೇಧ: ಭಕ್ತರು ಸಹಕರಿಸುವಂತೆ ಎ.ಈ.ರಘು ಮನವಿ

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…

3 hours ago