ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು.
ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸುವ ಎರಡನೇ ಹಂತದ ತಾಲೀಮು ಯಶಸ್ವಿಯಾಗಿ ನೆರವೇರಿತು.
ಇದನ್ನೂ ಓದಿ: ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 1,425 ಹುದ್ದೆಗಳು
ಅರಮನೆಯ ಫಿರಂಗಿಗಾಡಿಗಳಿಂದ ಕುಶಾಲತೋಪು ಸಿಡಿಸಿದ ತಾಲೀಮಿನಲ್ಲಿ ಎಲ್ಲಾ 14 ಆನೆಗಳು, ಅಶ್ವಾರೋಹಿ ದಳ ಭಾಗಿಯಾಗಿದ್ದವು. ಎರಡನೇ ಬಾರಿಯೂ ಹೇಮಾವತಿ, ರೂಪ ಮತ್ತು ಶ್ರೀಕಂಠ ಆನೆಗಳು ಕುಶಾಲತೋಪು ಸಿಡಿತದ ತಾಲೀಮಿನಲ್ಲಿ ಭಾಗವಹಿಸಿದ್ದವು.
ಸಿಡಿಮದ್ದು ತಾಲೀಮು ಫೈರಿಂಗ್ ಕಾರ್ಯದಲ್ಲಿ ಭಾಗಿಯಾಗಿದ್ದ 30ಕ್ಕೂ ಹೆಚ್ಚು ಸಿಎಆರ್ ಪೊಲೀಸರು ಏಳು ಫಿರಂಗಿ ಗಾಡಿಗಳಿಂದ, ತಲಾ ಮೂರು ಬಾರಿಯಂತೆ ಒಟ್ಟು 21 ಕುಶಾಲತೋಪುಗಳನ್ನು ಸಿಡಿಸಿದರು.
ದಸರಾ ಗಜಪಡೆ ಕುಶಾಲತೋಪು ಸಿಡಿತದ ಸದ್ದಿಗೆ ಬೆದರದೇ ಆತ್ಮಸ್ಥೈರ್ಯ ಪ್ರದರ್ಶಿಸಿದ್ದು, ಅಶ್ವಾರೋಹಿ ದಳದ ಕೆಲ ಕುದುರೆಗಳು ಮಾತ್ರ ಸಿಡಿಮದ್ದಿನ ಸದ್ದಿಗೆ ವಿಚಲಿತವಾದವು.
2ನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್, ಸಿಎಫ್ ರವಿಶಂಕರ್, ಡಿಸಿಎಫ್ ಡಾ. ಪ್ರಭುಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…