ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ 2ನೇ ಹಂತದ ಸಿಡಿಮದ್ದು ತಾಲೀಮು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು.

ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸುವ ಎರಡನೇ ಹಂತದ ತಾಲೀಮು ಯಶಸ್ವಿಯಾಗಿ ‌ನೆರವೇರಿತು.

ಇದನ್ನೂ ಓದಿ: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 1,425 ಹುದ್ದೆಗಳು

ಅರಮನೆಯ ಫಿರಂಗಿಗಾಡಿಗಳಿಂದ ಕುಶಾಲತೋಪು ಸಿಡಿಸಿದ ತಾಲೀಮಿನಲ್ಲಿ ಎಲ್ಲಾ 14 ಆನೆಗಳು, ಅಶ್ವಾರೋಹಿ ದಳ ಭಾಗಿಯಾಗಿದ್ದವು. ಎರಡನೇ ಬಾರಿಯೂ ಹೇಮಾವತಿ, ರೂಪ ಮತ್ತು ಶ್ರೀಕಂಠ ಆನೆಗಳು ಕುಶಾಲತೋಪು ಸಿಡಿತದ ತಾಲೀಮಿನಲ್ಲಿ ಭಾಗವಹಿಸಿದ್ದವು.

ಸಿಡಿಮದ್ದು ತಾಲೀಮು ಫೈರಿಂಗ್ ಕಾರ್ಯದಲ್ಲಿ ಭಾಗಿಯಾಗಿದ್ದ 30ಕ್ಕೂ ಹೆಚ್ಚು ಸಿಎಆರ್ ಪೊಲೀಸರು ಏಳು ಫಿರಂಗಿ ಗಾಡಿಗಳಿಂದ, ತಲಾ ಮೂರು ಬಾರಿಯಂತೆ ಒಟ್ಟು 21 ಕುಶಾಲತೋಪುಗಳನ್ನು ಸಿಡಿಸಿದರು.

ದಸರಾ ಗಜಪಡೆ ಕುಶಾಲತೋಪು ಸಿಡಿತದ ಸದ್ದಿಗೆ ಬೆದರದೇ ಆತ್ಮಸ್ಥೈರ್ಯ ಪ್ರದರ್ಶಿಸಿದ್ದು, ಅಶ್ವಾರೋಹಿ ದಳದ ಕೆಲ ಕುದುರೆಗಳು ಮಾತ್ರ ಸಿಡಿಮದ್ದಿನ ಸದ್ದಿಗೆ ವಿಚಲಿತವಾದವು.

2ನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್, ಸಿಎಫ್ ರವಿಶಂಕರ್, ಡಿಸಿಎಫ್ ಡಾ. ಪ್ರಭುಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago