ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು.
ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸುವ ಎರಡನೇ ಹಂತದ ತಾಲೀಮು ಯಶಸ್ವಿಯಾಗಿ ನೆರವೇರಿತು.
ಇದನ್ನೂ ಓದಿ: ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 1,425 ಹುದ್ದೆಗಳು
ಅರಮನೆಯ ಫಿರಂಗಿಗಾಡಿಗಳಿಂದ ಕುಶಾಲತೋಪು ಸಿಡಿಸಿದ ತಾಲೀಮಿನಲ್ಲಿ ಎಲ್ಲಾ 14 ಆನೆಗಳು, ಅಶ್ವಾರೋಹಿ ದಳ ಭಾಗಿಯಾಗಿದ್ದವು. ಎರಡನೇ ಬಾರಿಯೂ ಹೇಮಾವತಿ, ರೂಪ ಮತ್ತು ಶ್ರೀಕಂಠ ಆನೆಗಳು ಕುಶಾಲತೋಪು ಸಿಡಿತದ ತಾಲೀಮಿನಲ್ಲಿ ಭಾಗವಹಿಸಿದ್ದವು.
ಸಿಡಿಮದ್ದು ತಾಲೀಮು ಫೈರಿಂಗ್ ಕಾರ್ಯದಲ್ಲಿ ಭಾಗಿಯಾಗಿದ್ದ 30ಕ್ಕೂ ಹೆಚ್ಚು ಸಿಎಆರ್ ಪೊಲೀಸರು ಏಳು ಫಿರಂಗಿ ಗಾಡಿಗಳಿಂದ, ತಲಾ ಮೂರು ಬಾರಿಯಂತೆ ಒಟ್ಟು 21 ಕುಶಾಲತೋಪುಗಳನ್ನು ಸಿಡಿಸಿದರು.
ದಸರಾ ಗಜಪಡೆ ಕುಶಾಲತೋಪು ಸಿಡಿತದ ಸದ್ದಿಗೆ ಬೆದರದೇ ಆತ್ಮಸ್ಥೈರ್ಯ ಪ್ರದರ್ಶಿಸಿದ್ದು, ಅಶ್ವಾರೋಹಿ ದಳದ ಕೆಲ ಕುದುರೆಗಳು ಮಾತ್ರ ಸಿಡಿಮದ್ದಿನ ಸದ್ದಿಗೆ ವಿಚಲಿತವಾದವು.
2ನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್, ಸಿಎಫ್ ರವಿಶಂಕರ್, ಡಿಸಿಎಫ್ ಡಾ. ಪ್ರಭುಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…