ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು.
ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ ಕುಶಾಲತೋಪು ಸಿಡಿಸುವ ಎರಡನೇ ಹಂತದ ತಾಲೀಮು ಯಶಸ್ವಿಯಾಗಿ ನೆರವೇರಿತು.
ಇದನ್ನೂ ಓದಿ: ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 1,425 ಹುದ್ದೆಗಳು
ಅರಮನೆಯ ಫಿರಂಗಿಗಾಡಿಗಳಿಂದ ಕುಶಾಲತೋಪು ಸಿಡಿಸಿದ ತಾಲೀಮಿನಲ್ಲಿ ಎಲ್ಲಾ 14 ಆನೆಗಳು, ಅಶ್ವಾರೋಹಿ ದಳ ಭಾಗಿಯಾಗಿದ್ದವು. ಎರಡನೇ ಬಾರಿಯೂ ಹೇಮಾವತಿ, ರೂಪ ಮತ್ತು ಶ್ರೀಕಂಠ ಆನೆಗಳು ಕುಶಾಲತೋಪು ಸಿಡಿತದ ತಾಲೀಮಿನಲ್ಲಿ ಭಾಗವಹಿಸಿದ್ದವು.
ಸಿಡಿಮದ್ದು ತಾಲೀಮು ಫೈರಿಂಗ್ ಕಾರ್ಯದಲ್ಲಿ ಭಾಗಿಯಾಗಿದ್ದ 30ಕ್ಕೂ ಹೆಚ್ಚು ಸಿಎಆರ್ ಪೊಲೀಸರು ಏಳು ಫಿರಂಗಿ ಗಾಡಿಗಳಿಂದ, ತಲಾ ಮೂರು ಬಾರಿಯಂತೆ ಒಟ್ಟು 21 ಕುಶಾಲತೋಪುಗಳನ್ನು ಸಿಡಿಸಿದರು.
ದಸರಾ ಗಜಪಡೆ ಕುಶಾಲತೋಪು ಸಿಡಿತದ ಸದ್ದಿಗೆ ಬೆದರದೇ ಆತ್ಮಸ್ಥೈರ್ಯ ಪ್ರದರ್ಶಿಸಿದ್ದು, ಅಶ್ವಾರೋಹಿ ದಳದ ಕೆಲ ಕುದುರೆಗಳು ಮಾತ್ರ ಸಿಡಿಮದ್ದಿನ ಸದ್ದಿಗೆ ವಿಚಲಿತವಾದವು.
2ನೇ ಹಂತದ ಸಿಡಿಮದ್ದು ತಾಲೀಮಿನಲ್ಲಿ ಸಿಎಆರ್ ಡಿಸಿಪಿ ಸಿದ್ದನಗೌಡ ಪಾಟೀಲ್, ಸಿಎಫ್ ರವಿಶಂಕರ್, ಡಿಸಿಎಫ್ ಡಾ. ಪ್ರಭುಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…