ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ಆವರಣದಲ್ಲಿ ಜಂಬೂಸವಾರಿ ರಿಹರ್ಸಲ್ ನಡೆಸಲಾಯಿತು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರು ಅರಮನೆ ಆವರಣದಲ್ಲಿ ದಸರಾ ಆನೆಗಳು ಹಾಗೂ ಅಶ್ವಾರೋಹಿ ಪಡೆಗೆ ರಿಹರ್ಸಲ್ ನಡೆಸಲಾಯಿತು.
ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಅರಣ್ಯಾಧಿಕಾರಿ ರವಿಶಂಕರ್ ಹಾಗೂ ಡಿಸಿಎಫ್ ಡಾ.ಪ್ರಭುಗೌಡ ಅವರು ಅಭಿಮನ್ಯುವಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಇದನ್ನು ಓದಿ : ದಸರಾ: ಜಂಬೂ ಸವಾರಿಯತ್ತ ಜನರ ಚಿತ್ತ
ಜಂಬೂಸವಾರಿ ಮೆರವಣಿಗೆಯಲ್ಲಿ ಆನೆಗಳು, ಅಶ್ವರೋಹಿ ದಳದ ಕುದುರೆಗಳು, ಪೊಲೀಸ್ ಬ್ಯಾಂಡ್ ಸಾಗಿದ್ದು, 21 ಬಾರಿ ಕುಶಾಲತೋಪು ಸಿಡಿಸಿ, ರಾಷ್ಟ್ರಗೀತೆಗೆ ಗೌರವ ಸಲ್ಲಿಕೆ ಮಾಡಲಾಯಿತು.
ನಿಶಾನೆ ಆನೆಯಾಗಿ ಮೊದಲಿಗೆ ಧನಂಜಯ ಹೆಜ್ಜೆ ಹಾಕಿದ್ದು, ನೌಪತ್ ಆನೆಯಾಗಿ ಗೋಪಿ ಹೆಜ್ಜೆ ಹಾಕಿದನು. ಮೊದಲ ಹಂತದ ಸಾಲಾನೆಯಲ್ಲಿ ಮಹೇಂದ್ರ, ಶ್ರೀಕಂಠ, ಲಕ್ಷ್ಮಿ ಆನೆಗಳು ಹೆಜ್ಜೆ ಹಾಕಿದ್ದು, ಎರಡನೇ ಹಂತದಲ್ಲಿ ಕಂಜನ್, ಭೀಮ, ಏಕಲವ್ಯ ಹೆಜ್ಜೆ ಹಾಕಿದವು.
ಮೂರನೇ ಹಂತದಲ್ಲಿ ಪ್ರಶಾಂತ, ಸುಗ್ರೀವ, ಹೇಮಾವತಿ ಆನೆಗಳು ಹೆಜ್ಜೆ ಹಾಕಿದ್ದು, ಕ್ಯಾಪ್ಟನ್ ಅಭಿಮನ್ಯುವಿನ ಜೊತೆ ಕುಮ್ಕಿ ಆನೆಗಳಾಗಿ ಕಾವೇರಿ, ರೂಪ ಆನೆಗಳು ಹೆಜ್ಜೆ ಹಾಕಿದವು.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…