ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು, ದಸರಾ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಗಾಜಿನ ಮನೆಯ ಗಾಂಧಿ ಮಂಟಪದಲ್ಲಿ ಹಸಿರು ಟೇಪ್ ಕತ್ತರಿಸಿ ಉದ್ಘಾಟನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಮಹದೇವಪ್ಪ, ಶಾಸಕ ಹರೀಶ್ ಗೌಡ, ರವಿಶಂಕರ್, ಸಂಸದ ಸುನೀಲ್ ಬೋಸ್ ಸಾಥ್ ನೀಡಿದರು.
ಮೈಸೂರಿನ ಕುಪ್ಪಣ್ಣ ಪಾರ್ಕ್ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಕನ್ಯಾಕುಮಾರಿಯ ಗಾಂಧಿ ಮ್ಯೂಸಿಯಂ ಮಾದರಿ ನಿರ್ಮಾಣ ಮಾಡಲಾಗಿದೆ. 25ಕ್ಕೂ ಹೆಚ್ಚು ಬಗೆಯ ಲಕ್ಷಾಂತರ ಹೂಗಳಿಂದ ವಿವಿಧ ಕಲಾಕೃತಿಗಳು ಅರಳಿದ್ದು, ಆಪರೇಷನ್ ಸಿಂಧೂರ ನೆನಪಿಸುವ ಕಲಾಕೃತಿಗಳು ನೋಡುಗರ ಗಮನಸೆಳೆಯುತ್ತಿವೆ.
ಭಾರತೀಯ ವಾಯುಪಡೆ, ಭೂಸೇನೆ, ನೌಕಾಪಡೆ ಮಾಡೆಲ್ ಬಣ್ಣಬಣ್ಣದ ಹೂಗಳಿಂದ ಅರಳಿದ್ದು, ಭಾರತೀಯ ಸೇನೆಯ ಹೆಮ್ಮೆ S400 ಕಲಾಕೃತಿ ರಚನೆ ಮಾಡಲಾಗಿದೆ.
ಇನ್ನು ಕೆಂಪು ಗುಲಾಬಿ, ವಿವಿಧ ಬಣ್ಣದ ಹೂ ಮಿಶ್ರಿತ ಅಂಬಾರಿ ಹೊತ್ತ ಆನೆ ಆಕರ್ಷಣೀಯವಾಗಿದ್ದು, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…