ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ಉಡುಗೊರೆ ರೆಡಿಯಾಗಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನು ಎರಡು ದಿನ ಮಾತ್ರ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಇದಕ್ಕಾಗಿ ಮೈಸೂರು ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗಿದೆ.
ಇದನ್ನು ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಜಂಬೂಸವಾರಿ ರಿಹರ್ಸಲ್
ಇನ್ನು ಜಂಬೂಸವಾರಿ ದಿನದಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲು ವಿಶೇಷ ಉಡುಗೊರೆ ರೆಡಿಯಾಗಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಸಿದ್ದರಾಮೇಶ್ವರ ಪ್ರತಿಮೆ ಕಾಣಿಕೆ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೆಂಕೇರಮ್ಮ ಮೂರ್ತಿ ಪ್ರತಿಮೆ ಕಾಣಿಕೆ ನೀಡಲಾಗುತ್ತದೆ.
ಮೈಸೂರಿನ ಶಿಲ್ಪಿ ರಾಜೇಶ್ ಅವರು ಇವೆರಡು ಪ್ರತಿಮೆಗಳನ್ನು ಸಂಪೂರ್ಣ ಪಂಚ ಲೋಹದಿಂದ ಮಾಡಿದ್ದು, ಜಂಬೂಸವಾರಿ ದಿನದಂದು ನಂದಿ ಧ್ವಜ ಪೂಜೆ ಬಳಿಕ ಸಿಎಂ ಹಾಗೂ ಡಿಸಿಎಂಗೆ ಈ ಪ್ರತಿಮೆಗಳನ್ನು ನೀಡಲಿದ್ದಾರೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…