ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.
ವಿಶ್ವವಿಖ್ಯಾತ 415ನೇ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಿದರು. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಕೆ. ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.
ಪುಷ್ಪಾರ್ಚನೆ ಬಳಿಕ ಲೇಖಕಿ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಅಂಬಾರಿ ಆನೆಯ ಪ್ರತಿಕೃತಿ ನೀಡಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತವು ಉಳಿದವರಿಗೆ ತ್ರಿಪುರ ಸುಂದರದೇವಿ ಪ್ರತಿಕೃತಿ ನೀಡಿ ಸನ್ಮಾನಿಸಿತು.
ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಡಾ ಎಚ್ ಸಿ ಮಹದೇವಪ್ಪ, ಎಚ್ ಕೆ ಪಾಟೀಲ್, ಕೆ ವೆಂಕಟೇಶ್, ಶಿವರಾಜ್ ತಂಗಡಗಿ, ಕೆ ಎಚ್ ಮುನಿಯಪ್ಪ, ಶಾಸಕರುಗಳಾದ ಜಿ.ಟಿ ದೇವೇಗೌಡ, ತನ್ವಿರ್ ಸೇಠ್, ಅನಿಲ್ ಚಿಕ್ಕಮಾದು, ಟಿ ಎಸ್ ಶ್ರೀವತ್ಸ, ದರ್ಶನ್ ಧ್ರುವನಾರಾಯಣ್, ಕೆ ಹರೀಶ್ ಗೌಡ, ಡಿ ರವಿಶಂಕರ್, ರಮೇಶ್ ಬಂಡಿಸಿದ್ದೆಗೌಡ, ಎ ಆರ್ ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯರಾದ ಡಾ ಡಿ ತಿಮ್ಮಯ್ಯ, ಕೆ ಶಿವಕುಮಾರ್, ಸಿ ಎನ್ ಮಂಜೇಗೌಡ, ಕೆ ವಿವೇಕಾನಂದ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರಾಗಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…