ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.
ವಿಶ್ವವಿಖ್ಯಾತ 415ನೇ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಿದರು. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಕೆ. ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.
ಪುಷ್ಪಾರ್ಚನೆ ಬಳಿಕ ಲೇಖಕಿ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಅಂಬಾರಿ ಆನೆಯ ಪ್ರತಿಕೃತಿ ನೀಡಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತವು ಉಳಿದವರಿಗೆ ತ್ರಿಪುರ ಸುಂದರದೇವಿ ಪ್ರತಿಕೃತಿ ನೀಡಿ ಸನ್ಮಾನಿಸಿತು.
ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಡಾ ಎಚ್ ಸಿ ಮಹದೇವಪ್ಪ, ಎಚ್ ಕೆ ಪಾಟೀಲ್, ಕೆ ವೆಂಕಟೇಶ್, ಶಿವರಾಜ್ ತಂಗಡಗಿ, ಕೆ ಎಚ್ ಮುನಿಯಪ್ಪ, ಶಾಸಕರುಗಳಾದ ಜಿ.ಟಿ ದೇವೇಗೌಡ, ತನ್ವಿರ್ ಸೇಠ್, ಅನಿಲ್ ಚಿಕ್ಕಮಾದು, ಟಿ ಎಸ್ ಶ್ರೀವತ್ಸ, ದರ್ಶನ್ ಧ್ರುವನಾರಾಯಣ್, ಕೆ ಹರೀಶ್ ಗೌಡ, ಡಿ ರವಿಶಂಕರ್, ರಮೇಶ್ ಬಂಡಿಸಿದ್ದೆಗೌಡ, ಎ ಆರ್ ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯರಾದ ಡಾ ಡಿ ತಿಮ್ಮಯ್ಯ, ಕೆ ಶಿವಕುಮಾರ್, ಸಿ ಎನ್ ಮಂಜೇಗೌಡ, ಕೆ ವಿವೇಕಾನಂದ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರಾಗಿದ್ದರು.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…