ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.
ವಿಶ್ವವಿಖ್ಯಾತ 415ನೇ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್ ಅವರು ನೆರವೇರಿಸಿದರು. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವ ಮೂಲಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಕೆ. ವೆಂಕಟೇಶ್, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದರು.
ಪುಷ್ಪಾರ್ಚನೆ ಬಳಿಕ ಲೇಖಕಿ ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಅಂಬಾರಿ ಆನೆಯ ಪ್ರತಿಕೃತಿ ನೀಡಿ ಗೌರವ ಸಮರ್ಪಣೆ ಮಾಡಲಾಯಿತು. ಜಿಲ್ಲಾಡಳಿತವು ಉಳಿದವರಿಗೆ ತ್ರಿಪುರ ಸುಂದರದೇವಿ ಪ್ರತಿಕೃತಿ ನೀಡಿ ಸನ್ಮಾನಿಸಿತು.
ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಡಾ ಎಚ್ ಸಿ ಮಹದೇವಪ್ಪ, ಎಚ್ ಕೆ ಪಾಟೀಲ್, ಕೆ ವೆಂಕಟೇಶ್, ಶಿವರಾಜ್ ತಂಗಡಗಿ, ಕೆ ಎಚ್ ಮುನಿಯಪ್ಪ, ಶಾಸಕರುಗಳಾದ ಜಿ.ಟಿ ದೇವೇಗೌಡ, ತನ್ವಿರ್ ಸೇಠ್, ಅನಿಲ್ ಚಿಕ್ಕಮಾದು, ಟಿ ಎಸ್ ಶ್ರೀವತ್ಸ, ದರ್ಶನ್ ಧ್ರುವನಾರಾಯಣ್, ಕೆ ಹರೀಶ್ ಗೌಡ, ಡಿ ರವಿಶಂಕರ್, ರಮೇಶ್ ಬಂಡಿಸಿದ್ದೆಗೌಡ, ಎ ಆರ್ ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯರಾದ ಡಾ ಡಿ ತಿಮ್ಮಯ್ಯ, ಕೆ ಶಿವಕುಮಾರ್, ಸಿ ಎನ್ ಮಂಜೇಗೌಡ, ಕೆ ವಿವೇಕಾನಂದ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೈರಾಗಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…