ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಉದ್ಘಾಟಕಿ ಬಾನು ಮುಷ್ತಾಕ್ ಅವರು ಭಾಷಣ ಹೀಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು ಮುಷ್ತಾಕ್ ಅವರು, ಈ ದಿನ ದಸರಾ ಉತ್ಸವದ ಉದ್ಘಾಟನೆಯನ್ನು ತಾಯಿ ಚಾಮುಂಡೇಶ್ವರಿ ಕೃಪಾರ್ಶಿವಾದದಿಂದ ಉದ್ಘಾಟಿಸಿದ್ದೇನೆ.
ನನ್ನ ಗೆಳತಿಯೊಬ್ಬರು ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುತ್ತೇನೆ ಎಂದು ಹರಕೆ ಹೊತ್ತಿದ್ದಳು. ಬರಲು ಸಾಧ್ಯವಾಗಿರಲಿಲ್ಲ. ಆದರೆ ರಾಜ್ಯ ಸರ್ಕಾರದ ಮೂಲಕ ನನ್ನನ್ನು ಚಾಮುಂಡೇಶ್ವರಿ ಕರೆಸಿಕೊಂಡಿದ್ದಾಳೆ. ಒಂದು ಚರಿತ್ರಿಕ ಸನ್ನಿವೇಶಗಳು ಉದ್ಭವವಾದರು ತಾಯಿ ಚಾಮುಂಡೇಶ್ವರಿ ಕರೆಸಿಕೊಂಡಿದ್ದಾಳೆ. ಸಾಂಸ್ಕೃತಿಕ ಉತ್ಸವ ಎಲ್ಲರನ್ನು ಸಮನ್ವಯಗೊಳಿಸುತ್ತದೆ. ಈ ಮಣ್ಣಿನಲ್ಲಿ ಹುಟ್ಟಿರುವ ಪ್ರತಿಯೊಬ್ಬರಿಗೂ ಪಾಲ್ಗೊಳ್ಳುವ ಅವಕಾಶ ಇದೆ. ಕನ್ನಡ ಭಾಷೆಯ ಹೃದಯದ ಸ್ಪಂದನೆಗೆ ಈ ಹಬ್ಬ ನೆನಪಿಸುತ್ತದೆ. ಏಕತೆಯ ಸುಗಂಧ ಈ ಹಬ್ಬದ ಪ್ರತೀಕವಾಗಿದೆ ಮೈಸೂರಿನ ಉರ್ದು ಭಾಷಿಕರು ದಸರಾ ಹಬ್ಬದ ಎಲ್ಲಾ ಹತ್ತು ದಿನಗಳಲ್ಲೂ ತಮ್ಮ ಗುರುತುಗಳನ್ನು ನೀಡಿದ್ದಾರೆ.
ಎಲ್ಲರನ್ನು ಒಳಗೊಂಡು ಆಚರಿಸುವ ಸಂಸ್ಕೃತಿ ಇದಾಗಿದೆ. ನನ್ನ ಮಾವ ಮೈಸೂರು ಮಹಾರಾಜರ ಅಂಗ ರಕ್ಷಕರಾಗಿದ್ದರು. ಅಂತಹ ಅನೇಕ ಮುಸ್ಲಿಂಮರು ಮಹಾರಾಜರಿಗೆ ಅಂಗರಕ್ಷಕರಾಗಿದ್ದರು. ಮಹಾರಾಜರು ಮುಸ್ಲಿಂರನ್ನು ನಂಬಿ ಅವರನ್ನು ಅಂಗರಕ್ಷಕರಾಗಿ ಇಟ್ಟು ಕೊಂಡಿದ್ದು ಬಹಳ ಖುಷಿ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸೋಣ. ಈ ದಸರಾ ಕೇವಲ ಮೈಸೂರಿಗೆ ಸೀಮಿತವಾಗದೆ ಇಡೀ ಜಗತ್ತಿನ ಮಾನವ ಕುಲಕ್ಕೆ ಶಾಂತಿ, ನ್ಯಾಯ, ಸಮಾನತೆಯ ದೀಪವಾಗಲಿ. ಈ ದಸರಾ ಆಚರಣೆ ಇಡೀ ಪ್ರಪಂಚಾದ್ಯಂತ ನೆಲೆ ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ.
ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಂಡಿರುತ್ತಾನೆ. ಪರಿಸರ ಎಂದಿಗೂ ಗಡಿ ಹಾಕಿಕೊಳ್ಳುವುದಿಲ್ಲ.. ಸ್ತ್ರೀ ಎಂದರೆ ಕೇವಲ ತಾಯಿ ಮಾತ್ರವಲ್ಲ ಅನ್ಯಾಯದ ವಿರುದ್ಧ ಹೊರಡುವ ಶಕ್ತಿಯು ಹೌದು. ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಂಡಿರುತ್ತಾನೆ. ಪರಿಸರ ಎಂದಿಗೂ ಗಡಿ ಹಾಕಿಕೊಳ್ಳುವುದಿಲ್ಲ.. ನಾನು ನೂರಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಂಗಳಾರತಿಯನ್ನು ತೆಗೆದುಕೊಂಡಿದ್ದೇನೆ. ಎಷ್ಟೇ ಸವಾಲುಗಳು ಬಂದರು ದಿಟ್ಟವಾಗಿ ನಿಂತು ನೈತಿಕ ಬೆಂಬಲ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಭಾಷಣ ಮುಗಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…