ನಮ್ಮ ಮೈಸೂರ ದಸರಾ 2025

ಉದ್ಘಾಟನಾ ಕಾರ್ಯಕ್ರಮದಲ್ಲಿ ಲೇಖಕಿ ಬಾನು ಮುಷ್ತಾಕ್‌ ಭಾಷಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಉದ್ಘಾಟಕಿ ಬಾನು ಮುಷ್ತಾಕ್‌ ಅವರು ಭಾಷಣ ಹೀಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು ಮುಷ್ತಾಕ್‌ ಅವರು, ಈ ದಿನ ದಸರಾ ಉತ್ಸವದ ಉದ್ಘಾಟನೆಯನ್ನು ತಾಯಿ ಚಾಮುಂಡೇಶ್ವರಿ ಕೃಪಾರ್ಶಿವಾದದಿಂದ ಉದ್ಘಾಟಿಸಿದ್ದೇನೆ.

ನನ್ನ ಗೆಳತಿಯೊಬ್ಬರು ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುತ್ತೇನೆ ಎಂದು ಹರಕೆ ಹೊತ್ತಿದ್ದಳು. ಬರಲು ಸಾಧ್ಯವಾಗಿರಲಿಲ್ಲ. ಆದರೆ ರಾಜ್ಯ ಸರ್ಕಾರದ ಮೂಲಕ ನನ್ನನ್ನು ಚಾಮುಂಡೇಶ್ವರಿ ಕರೆಸಿಕೊಂಡಿದ್ದಾಳೆ. ಒಂದು ಚರಿತ್ರಿಕ ಸನ್ನಿವೇಶಗಳು ಉದ್ಭವವಾದರು ತಾಯಿ ಚಾಮುಂಡೇಶ್ವರಿ ಕರೆಸಿಕೊಂಡಿದ್ದಾಳೆ. ಸಾಂಸ್ಕೃತಿಕ ಉತ್ಸವ ಎಲ್ಲರನ್ನು ಸಮನ್ವಯಗೊಳಿಸುತ್ತದೆ. ಈ ಮಣ್ಣಿನಲ್ಲಿ ಹುಟ್ಟಿರುವ ಪ್ರತಿಯೊಬ್ಬರಿಗೂ ಪಾಲ್ಗೊಳ್ಳುವ ಅವಕಾಶ ಇದೆ. ಕನ್ನಡ ಭಾಷೆಯ ಹೃದಯದ ಸ್ಪಂದನೆಗೆ ಈ ಹಬ್ಬ ನೆನಪಿಸುತ್ತದೆ. ಏಕತೆಯ ಸುಗಂಧ ಈ ಹಬ್ಬದ ಪ್ರತೀಕವಾಗಿದೆ ಮೈಸೂರಿನ ಉರ್ದು ಭಾಷಿಕರು ದಸರಾ ಹಬ್ಬದ ಎಲ್ಲಾ ಹತ್ತು ದಿನಗಳಲ್ಲೂ ತಮ್ಮ ಗುರುತುಗಳನ್ನು ನೀಡಿದ್ದಾರೆ.

ಎಲ್ಲರನ್ನು ಒಳಗೊಂಡು ಆಚರಿಸುವ ಸಂಸ್ಕೃತಿ ಇದಾಗಿದೆ. ನನ್ನ ಮಾವ ಮೈಸೂರು ಮಹಾರಾಜರ ಅಂಗ ರಕ್ಷಕರಾಗಿದ್ದರು. ಅಂತಹ ಅನೇಕ ಮುಸ್ಲಿಂಮರು ಮಹಾರಾಜರಿಗೆ ಅಂಗರಕ್ಷಕರಾಗಿದ್ದರು. ಮಹಾರಾಜರು ಮುಸ್ಲಿಂರನ್ನು ನಂಬಿ ಅವರನ್ನು ಅಂಗರಕ್ಷಕರಾಗಿ ಇಟ್ಟು ಕೊಂಡಿದ್ದು ಬಹಳ ಖುಷಿ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸೋಣ. ಈ ದಸರಾ ಕೇವಲ ಮೈಸೂರಿಗೆ ಸೀಮಿತವಾಗದೆ ಇಡೀ ಜಗತ್ತಿನ ಮಾನವ ಕುಲಕ್ಕೆ ಶಾಂತಿ, ನ್ಯಾಯ, ಸಮಾನತೆಯ ದೀಪವಾಗಲಿ. ಈ ದಸರಾ ಆಚರಣೆ ಇಡೀ ಪ್ರಪಂಚಾದ್ಯಂತ ನೆಲೆ ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ.

ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಂಡಿರುತ್ತಾನೆ. ಪರಿಸರ ಎಂದಿಗೂ ಗಡಿ ಹಾಕಿಕೊಳ್ಳುವುದಿಲ್ಲ.. ಸ್ತ್ರೀ ಎಂದರೆ ಕೇವಲ ತಾಯಿ ಮಾತ್ರವಲ್ಲ ಅನ್ಯಾಯದ ವಿರುದ್ಧ ಹೊರಡುವ ಶಕ್ತಿಯು ಹೌದು. ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಂಡಿರುತ್ತಾನೆ. ಪರಿಸರ ಎಂದಿಗೂ ಗಡಿ ಹಾಕಿಕೊಳ್ಳುವುದಿಲ್ಲ.. ನಾನು ನೂರಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಂಗಳಾರತಿಯನ್ನು ತೆಗೆದುಕೊಂಡಿದ್ದೇನೆ. ಎಷ್ಟೇ ಸವಾಲುಗಳು ಬಂದರು ದಿಟ್ಟವಾಗಿ ನಿಂತು ನೈತಿಕ ಬೆಂಬಲ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಭಾಷಣ ಮುಗಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

8 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

9 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

9 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

9 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

9 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

10 hours ago