ನಮ್ಮ ಮೈಸೂರ ದಸರಾ 2025

ಉದ್ಘಾಟನಾ ಕಾರ್ಯಕ್ರಮದಲ್ಲಿ ಲೇಖಕಿ ಬಾನು ಮುಷ್ತಾಕ್‌ ಭಾಷಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಉದ್ಘಾಟಕಿ ಬಾನು ಮುಷ್ತಾಕ್‌ ಅವರು ಭಾಷಣ ಹೀಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು ಮುಷ್ತಾಕ್‌ ಅವರು, ಈ ದಿನ ದಸರಾ ಉತ್ಸವದ ಉದ್ಘಾಟನೆಯನ್ನು ತಾಯಿ ಚಾಮುಂಡೇಶ್ವರಿ ಕೃಪಾರ್ಶಿವಾದದಿಂದ ಉದ್ಘಾಟಿಸಿದ್ದೇನೆ.

ನನ್ನ ಗೆಳತಿಯೊಬ್ಬರು ಚಾಮುಂಡಿ ಬೆಟ್ಟಕ್ಕೆ ಕರೆದುಕೊಂಡು ಬರುತ್ತೇನೆ ಎಂದು ಹರಕೆ ಹೊತ್ತಿದ್ದಳು. ಬರಲು ಸಾಧ್ಯವಾಗಿರಲಿಲ್ಲ. ಆದರೆ ರಾಜ್ಯ ಸರ್ಕಾರದ ಮೂಲಕ ನನ್ನನ್ನು ಚಾಮುಂಡೇಶ್ವರಿ ಕರೆಸಿಕೊಂಡಿದ್ದಾಳೆ. ಒಂದು ಚರಿತ್ರಿಕ ಸನ್ನಿವೇಶಗಳು ಉದ್ಭವವಾದರು ತಾಯಿ ಚಾಮುಂಡೇಶ್ವರಿ ಕರೆಸಿಕೊಂಡಿದ್ದಾಳೆ. ಸಾಂಸ್ಕೃತಿಕ ಉತ್ಸವ ಎಲ್ಲರನ್ನು ಸಮನ್ವಯಗೊಳಿಸುತ್ತದೆ. ಈ ಮಣ್ಣಿನಲ್ಲಿ ಹುಟ್ಟಿರುವ ಪ್ರತಿಯೊಬ್ಬರಿಗೂ ಪಾಲ್ಗೊಳ್ಳುವ ಅವಕಾಶ ಇದೆ. ಕನ್ನಡ ಭಾಷೆಯ ಹೃದಯದ ಸ್ಪಂದನೆಗೆ ಈ ಹಬ್ಬ ನೆನಪಿಸುತ್ತದೆ. ಏಕತೆಯ ಸುಗಂಧ ಈ ಹಬ್ಬದ ಪ್ರತೀಕವಾಗಿದೆ ಮೈಸೂರಿನ ಉರ್ದು ಭಾಷಿಕರು ದಸರಾ ಹಬ್ಬದ ಎಲ್ಲಾ ಹತ್ತು ದಿನಗಳಲ್ಲೂ ತಮ್ಮ ಗುರುತುಗಳನ್ನು ನೀಡಿದ್ದಾರೆ.

ಎಲ್ಲರನ್ನು ಒಳಗೊಂಡು ಆಚರಿಸುವ ಸಂಸ್ಕೃತಿ ಇದಾಗಿದೆ. ನನ್ನ ಮಾವ ಮೈಸೂರು ಮಹಾರಾಜರ ಅಂಗ ರಕ್ಷಕರಾಗಿದ್ದರು. ಅಂತಹ ಅನೇಕ ಮುಸ್ಲಿಂಮರು ಮಹಾರಾಜರಿಗೆ ಅಂಗರಕ್ಷಕರಾಗಿದ್ದರು. ಮಹಾರಾಜರು ಮುಸ್ಲಿಂರನ್ನು ನಂಬಿ ಅವರನ್ನು ಅಂಗರಕ್ಷಕರಾಗಿ ಇಟ್ಟು ಕೊಂಡಿದ್ದು ಬಹಳ ಖುಷಿ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸೋಣ. ಈ ದಸರಾ ಕೇವಲ ಮೈಸೂರಿಗೆ ಸೀಮಿತವಾಗದೆ ಇಡೀ ಜಗತ್ತಿನ ಮಾನವ ಕುಲಕ್ಕೆ ಶಾಂತಿ, ನ್ಯಾಯ, ಸಮಾನತೆಯ ದೀಪವಾಗಲಿ. ಈ ದಸರಾ ಆಚರಣೆ ಇಡೀ ಪ್ರಪಂಚಾದ್ಯಂತ ನೆಲೆ ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ.

ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಂಡಿರುತ್ತಾನೆ. ಪರಿಸರ ಎಂದಿಗೂ ಗಡಿ ಹಾಕಿಕೊಳ್ಳುವುದಿಲ್ಲ.. ಸ್ತ್ರೀ ಎಂದರೆ ಕೇವಲ ತಾಯಿ ಮಾತ್ರವಲ್ಲ ಅನ್ಯಾಯದ ವಿರುದ್ಧ ಹೊರಡುವ ಶಕ್ತಿಯು ಹೌದು. ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು. ಮನುಷ್ಯ ಮಾತ್ರ ಗಡಿಗಳನ್ನು ಹಾಕಿಕೊಂಡಿರುತ್ತಾನೆ. ಪರಿಸರ ಎಂದಿಗೂ ಗಡಿ ಹಾಕಿಕೊಳ್ಳುವುದಿಲ್ಲ.. ನಾನು ನೂರಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಂಗಳಾರತಿಯನ್ನು ತೆಗೆದುಕೊಂಡಿದ್ದೇನೆ. ಎಷ್ಟೇ ಸವಾಲುಗಳು ಬಂದರು ದಿಟ್ಟವಾಗಿ ನಿಂತು ನೈತಿಕ ಬೆಂಬಲ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಭಾಷಣ ಮುಗಿಸಿದರು.

ಆಂದೋಲನ ಡೆಸ್ಕ್

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

4 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

6 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

7 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

8 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

12 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

12 hours ago