dasara programme
ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು.
ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು.
ಮೈಸೂರು ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಹಿತ್ಯ ಪ್ರಕಾರದ ನೃತ್ಯ, ಕೊಳ್ಳೇಗಾಲ ವಿದ್ಯಾನಗರ ಜೆ.ಎಸ್.ಎಸ್ ಶುಶ್ರೂಷ್ ಶಾಲೆ ಜಾನಪದ ನೃತ್ಯ, ಮೈಸೂರು ಸರಸ್ವತಿ ಪುರಂ ಜೆ ಎಸ್ ಎಸ್ ಮಹಿಳಾ ಐ ಟಿಐ ಡಿ ಎಲ್ ಡಿ ಕಾಲೇಜಿನ ವಿದ್ಯಾರ್ಥಿಗಳು ಶಿವತಾಂಡವ ನೃತ್ಯಗಳು ಯುವಕರ ಶಿಳ್ಳೆ ಚಪ್ಪಾಳೆಯ ಝೇಂಕಾರ ಮಾಡಿದವು.
ಇಂದು ನಡೆದ ಕಾರ್ಯಕ್ರಮದಲ್ಲಿ 53 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ದೇಶಭಕ್ತಿ ಸ್ವಾತಂತ್ಯ ಚಳುವಳಿ, ಯುವಜನತೆಯ ರೈತರು & ಯೋಧರು, ಆದಿಶಕ್ತಿ, ವೀರವನತಿಯರ ಕುರಿತು, ಮತದಾನ ಮತ್ತು ಪ್ರಜಾಪ್ರಭುತ್ವ, ಕನ್ನಡ ಸಂಸ್ಕೃತಿ, ಭಾರತೀಯ ಸೈನ್ಯದಲ್ಲಿ ಮಹಿಳಾಯೋಧರು ಹೀಗೆ ಮಂಡ್ಯ, ಮೈಸೂರು, ವಿಜಯಪುರ, ಮದ್ದೂರು, ಬೆಂಗಳೂರು, ಹುಣಸೂರು ನಾನಾ ಕಡೆಯ ಕಾಲೇಜಿನ ವಿದ್ಯಾರ್ಥಿಗಳು ಈ ರೀತಿಯ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…