ನಮ್ಮ ಮೈಸೂರ ದಸರಾ 2025

ಯುವ ದಸರಾ | ಬಾಲಿವುಡ್‌ ಗಾಯಕ ಪ್ರೀತಮ್‌ ಮೋಡಿ

ಮೈಸೂರು : ಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ ಹಾಗೂ ಗಾಯಕ ಪ್ರೀತಮ್ ಚಕ್ರವರ್ತಿ ಗಾನಸುಧೆಗೆ ಮೈಸೂರಿನ ಯುವ ಮನಸ್ಸುಗಳು ಒಂದಾದವು. ಬಾಲಿವುಡ್‌ ಟಾಪ್‌ ಹಾಡುಗಾರರ ತಂಡದ ಸವಿಗಾನ ಕಿವಿ ಇಂಪಾಗಿಸಿತು.

ನಗರದ ಹೊರವಲಯದ ಉತ್ತನಹಳ್ಳಿ ಬಳಿ ಆಯೋಜಿಸಿರುವ ಯುವ ದಸರಾ 2ನೇ ದಿನದ ವೇದಿಕೆಯಲ್ಲಿ ಗಾಯಕ ಪ್ರೀತಮ್ ಬರುತ್ತಿದ್ದಂತೆ ಯುವ ಸಮೂಹ ಶಿಳ್ಳೆ ಚಪ್ಪಾಳೆ ಮೂಲಕ ನೆಚ್ಚಿನ ಗಾಯಕನನ್ನು ಬರಮಾಡಿಕೊಂಡರು.

ಯುವ ಸಮೂಹದ ಹರ್ಷ ನೋಡಿದ ಗಾಯಕ ಪ್ರೀತಮ್ ಹೇ ದಿಲ್ ಹೇ ಮುಸ್ಕಿಲ, ಥೂ ಮೇರಿ ಸನಮ್, ಥುಮ್ ಜೋ ಆಯೆ, ಅಭಿ ಕುಚ್ ಡೇನೆ, ಹಲ್ಕಾ ಹಲ್ಕಾ ಹೇ ಸಮಾ, ಬಿನ್ ತೇರಿ ಸೇರಿದಂತೆ ತಮ್ಮ ಹಲವು ಹಿಂದಿ ಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

ಇದಲ್ಲದೆ ಕನ್ನಡದ ಸುದೀಪ್ ನಟನೆಯ ಎಕ್ಕ ಸಕ್ಕ ಎಕ್ಕ ಸಕ್ಕ ಹಾಡು ಹಾಡುತ್ತಿದ್ದಂತೆ ಇಡೀ ಪ್ರೇಕ್ಷಕರು ಎದ್ದು ಡ್ಯಾನ್ಸ್ ಮಾಡಿದರು. ಇದಕ್ಕೂ ಮುನ್ನ ಬಾಲಿವುಡ್ ಶೋರ್ ಪೊಲೀಸ್ ಗಾಯಕರ ತಂಡ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ತೊಬ್ ತೋಬ, ಊರ್ವಶಿ ಊರ್ವಶಿ ಹಾಗೂ ಇನ್ನಿತರ ಹಿಂದಿ ಗೀತೆಗಳನ್ನು ಹಾಡಿ ಯುವ ದಸರಾ ವೇದಿಕೆಯಲ್ಲಿ ಮೋಡಿ ಮಾಡಿದರು.

ಸಿಎಂ ಡಿಸಿಎಂ ಗೆ ಸನ್ಮಾನ
ಯುವ ದಸರಾ ವೇದಿಕೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಕೆ. ಜೆ ಜಾರ್ಜ್ ಅವರಿಗೆ ಯುವ ದಸರಾ ಉಪ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಈ ವೇಳೆ ಸಚಿವರಾದ ಭೈರತಿ ಸುರೇಶ್ ಸಂಸದರಾದ ಸುನೀಲ್ ಬೋಸ್, ಪರಿಷತ್ ಸದಸ್ಯರಾದ ಶಿವಕುಮಾರ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಉಪಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago