ನಮ್ಮ ಮೈಸೂರ ದಸರಾ 2025

ಯುವ ಸಂಭ್ರಮ | ಮಾದಕ ವ್ಯಸನಗಳ ಬಗ್ಗೆ ಜಾಗೃತಿ ಮೂಡಿಸಿದ ನೃತ್ಯ ರೂಪಕ

ಮೈಸೂರು : ಯುವ ಸಮೂಹ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗಿ ಜೀವನ ಹಾಳು ಮಾಡಿಕೊಳ್ಳುತ್ತಿರುವ ಸಂಗತಿ ಯುವ ಸಂಭ್ರಮದಲ್ಲಿ ನೃತ್ಯದ ಸ್ವರೂಪ ಪಡೆಯಿತು.

ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ ಅಂಗವಾಗಿ ನಡೆಯುತ್ತಿರುವ ಯುವ ಸಂಭ್ರಮದ ೭ನೇ ದಿನವಾದ ಮಂಗಳವಾರ ಕೆ.ಆರ್.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ದಾಸರಾಗಿ ಕುಟುಂಬಕ್ಕೆ ಶಾಪವಾಗಿ, ಬದುಕಿಗೆ ಮುಳುವಾಗುವ ಸಂಗತಿಯನ್ನು ನೃತ್ಯದ ಮೂಲಕ ಕಟ್ಟಿಕೊಟ್ಟರು. ನೆರೆದಿದ್ದ ಯುವ ಸಮೂಹ ಎದ್ದು ನಿಂತು ಚಪ್ಪಾಳೆ ತಟ್ಟಿ ನೃತ್ಯದ ಸಂದೇಶವನ್ನು ಸ್ವೀಕರಿಸಿದರು.

ಎಸ್‌ಎಸ್‌ಎಲ್‌ಸಿ ಮುಗಿಸಿ ಕಾಲೇಜು ವಿದ್ಯಾಭ್ಯಾಸಕ್ಕೆ ನಗರದ ಕಾಲೇಜಿಗೆ ಸೇರುವ ಯುವಕನೊಬ್ಬ ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ದುಶ್ಚಟಕ್ಕೆ ಬಿದ್ದು ತನ್ನ ತಾಯಿಯನ್ನು ಕಳೆದುಕೊಂಡು ರೋಧಿಸುವ ಘಟನೆಯನ್ನು ನೃತ್ಯದ ಮೂಲಕ ಸೊಗಸಾಗಿ ವೇದಿಕೆ ಮೇಲೆ ತಂದು ನೆರೆದಿದ್ದವರ ಮನ ಗೆದ್ದರು. ಇದರೊಂದಿಗೆ ಕನ್ನಡ ಪ್ರೇಮ, ನಾಡಿನ ಸಂಸ್ಕೃತಿ, ಜಾನಪದ ನೃತ್ಯದ ಸೊಬಗು, ಸಂವಿಧಾನದ ಮಹತ್ವ, ರೈತರ ಕೆಚ್ಚೆದೆಯ ಸೇವೆ, ಯೋಧರ ಬಲಿದಾನ, ರಾಷ್ಟ್ರೀಯ ಭಾವೈಕ್ಯತೆಗೆ ಯುವಸಂಭ್ರಮದ ವೇದಿಕೆ ಸಾಕ್ಷಿಯಾಯಿತು. ಕರುನಾಡಿನ ದಸರಾ ವೈಭವದೊಂದಿಗೆ ಜೈ ಜವಾನ್ ಜೈ ಕಿಸಾನ್, ಜೈ ಭೀಮ್ ಘೋಷಣೆಗಳು ಮೊಳಗಿದವು.

ಕಳೆದರೆಡು ದಿನಗಳಿಂದ ಯುವ ಸಂಭ್ರಮ ವೇದಿಕೆ ಸಂಜೆ ೬ ಗಂಟೆಯೊಳಗೆ ಭರ್ತಿಯಾಗುತ್ತಿದ್ದು, ಕಿಕ್ಕಿರಿದು ನೆರೆದಿದ್ದ ಯುವ ಸಮೂಹ ಕುಣಿದು ಕುಪ್ಪಳಿಸಿ ಜೋಷ್ ನೀಡಿದರು. ಸ್ವಚ್ಚತೆಯಲ್ಲಿ ಮೈಸೂರು ಪ್ರಶಸ್ತಿಗೆ ಭಾಜನವಾಗಲು ಕಾರಣೀಭೂತರಾದ ಸ್ವಚ್ಚತಾ ಕಾರ್ಮಿಕರನ್ನು ಸನ್ಮಾನಿಸಿ, ಅವರ ಶ್ರಮವನ್ನು ಯುವ ಸಮೂಹದ ಎದೆಗೆ ತಲುಪಿಸಿದರು.

ದಟ್ಟಗಳ್ಳಿಯ ಶ್ರೀ ಲಕ್ಷ್ಮಿಹಯಗ್ರೀವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪೌರಾಣಿಕತೆಯ ಪ್ರಸಂಗವನ್ನು ನೃತ್ಯದ ಮೂಲಕ ಊಣಬಡಿಸಿದರು. ನಂಜನಗೂಡಿನ ಜೆಎಸ್‌ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ‘ದೇವ ಶ್ರೀ ಗಣೇಶ’ ಹಾಡಿನಲ್ಲಿ ಗಣಪತಿ ಹಬ್ಬದ ಸಂಭ್ರಮ ಸಾರಿದರು. ಹೊಳೆ ನರಸೀಪುರದ ಸರ್ಕಾರಿ ಪಾಲಿಟೆಕ್ನಿಕ್ ತಂಡ ಕನ್ನಡ ನಟರನ್ನು ಪರಿಚಯಿಸುವ ಸಿನಿಮಾ ಆಧಾರಿತ ನೃತ್ಯ ಪ್ರದರ್ಶಿಸಿದರು.

ಗಂಗೋತ್ರಿಯ ಜ್ಞಾನ ದೀಪ ಪ್ರಥಮ ದರ್ಜೆ ಕಾಲೇಜಿನ ತಂಡ ಹಿರಣ್ಯ ಕಶ್ಯಪನ ಜೀವನ ಚರಿತ್ರೆಯನ್ನು ಭಕ್ತ ಪ್ರಹ್ಲಾದ ಸಿನಿಮಾದ ತುಣುಕು ಮತ್ತು ಸಂಭಾಷಣೆಗಳನ್ನು ಒಳಗೊಂಡ ನೃತ್ಯ ರೂಪಕದ ಮೂಲಕ ಹರಿ ನಾರಾಯಣ ದೇವರ ಭಕ್ತಿ ಸಿಂಚನ ಗೈದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ‘ನಾಯಕ ನೀನು ಭೀಮ ರಾವ್’ ಹಾಡಿನ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಮತ್ತು ಸಂವಿಧಾನದ ಮಹತ್ವವನ್ನು ಸಾರಿದರು. ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡ ಜಾನಪದ ನೃತ್ಯ ಸೊಬಗನ್ನು ಉಣಬಡಿಸಿದರು.

ಆಂದೋಲನ ಡೆಸ್ಕ್

Recent Posts

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

29 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

4 hours ago